Bengaluru: ರೈತರ (landlord cant obstruct farmers) ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ರೈತರಿಂದ ರಾಜ್ಯಾದ್ಯಂತ ಈ ಕುರಿತು
ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು, ತೊಂದರೆ ಮಾಡುತ್ತಿದ್ದ ಭೂ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರೈತರ ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿಯ ಸಮಸ್ಯೆ ಇದ್ದು, ಇದರಿಂದ ರೈತರಿಗೆ
ತೊಂದರೆಗಳಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದೆ. ಅದು ಈ ರೀತಿಯಾಗಿದ್ದು, ಕೆಲವು ಖಾಸಗಿ ಜಮೀನುಗಳನ್ನು (Site) ಅಕ್ಕಪಕ್ಕದ ಜಮೀನುಗಳ ರೈತರು ದಾಟಿಕೊಂಡು ಕೃಷಿ ಪೂರಕ
ಚಟುವಟಿಕೆಗಳನ್ನು ಮಾಡಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಸಾರ್ವಜನಿಕರಿಂದ ಮನವಿ/ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಕೆಲವು ಭೂಮಾಲೀಕರು, ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ರೈತರು ತಿರುಗಾಡಲು ಅವಕಾಶವಿದ್ದರು ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದಲ್ಲದೆ, ಅಂತಹ ಜಾಗಗಳನ್ನು ಮುಚ್ಚಿರುವ
ಉದಾಹರಣೆಗಳಿದ್ದು, ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ ಅಸೂಯೆಗಳು ಮತ್ತು ಹೊಂದಾಣಿಕೆಯ (landlord cant obstruct farmers) ಕೊರತೆಗಳು ಇದಕ್ಕೆ ಕಾರಣವಾಗಿವೆ.
ತಿರುಗುವ ದಾರಿಗಳನ್ನು ಸುಗಮಗೊಳಿಸಲು ಕ್ರಮ
ತಾಲ್ಲೂಕಿನ ತಹಶೀಲ್ದಾರರು ನಕಾಶೆ (Map) ಕಂಡ ಕಾಲುದಾರಿ, ಬಂಡಿದಾರಿ ಹಾಗೂ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡ್ಡಿ ಪಡಿಸುವಂತಹ ಆ ಬಳಸಲು
ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗುವ ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸುತ್ತೋಲೆಯಲ್ಲಿ ಹೊರಡಿಸಲಾಗಿದೆ.
ರಿಜಿಸ್ಟರ್ನಲ್ಲಿ ನಮೂದಿಸಲು ಅವಕಾಶ
ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್ನಲ್ಲಿ (Register) ನಮೂದು ಮಾಡಲು ಅವಕಾಶವಿದ್ದು, ಕರ್ನಾಟಕ (Karnataka) ಭೂ ಕಂದಾಯ
ನಿಯಮಗಳು, 1966ರ ನಿಯಮ 59 ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದೆ. ದಿ ಇಂಡಿಯನ್ ಈಸ್ಮೆಂಟ್ ಆಕ್ಟ್ (The Indian Easement Act), 1882 ರಂತೆ
ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕನ್ನು ಹೊಂದಿದ್ದು, ಇದಕ್ಕೆ ಅನ್ಯಭೂಮಾಲೀಕರಿಂದ
ಯಾವುದೇ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ.
- ಭವ್ಯಶ್ರೀ ಆರ್.ಜೆ