80 ಸಾವಿರ ಆಸನ ಸಾಮರ್ಥ್ಯದ ಬೃಹತ್ (largest cricket stadium in Anekal) ಸ್ಟೇಡಿಯಂ ನಿರ್ಮಾಣಕ್ಕೆ ಚಾಲನೆ, ಕ್ರೀಡಾಭಿವೃದ್ಧಿಗೆ ಹೊಸ ಅಧ್ಯಾಯ
900 ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರಿಕೆಟ್ ಅಖಾಡ ನಿರ್ಮಾಣಕ್ಕೆ ಪ್ಲಾನ್
ಒಳಾಂಗಣ, ಜಲಕ್ರೀಡೆ ಸೇರಿದಂತೆ ಹಲವು ಆಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣ ಕಾರ್ಯ ಆರಂಭ
Bengaluru: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೂರ್ಯನಗರ (largest cricket stadium in Anekal) ಭಾಗದಲ್ಲಿ ನಿರ್ಮಾಣವಾಗಲಿರುವ ದೇಶದ ಎರಡನೇ ಅತಿ ದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೂಮಿಪೂಜೆ ನೆರವೇರಿಸಿದರು.
ಈ ಬಹು ನಿರೀಕ್ಷಿತ ಯೋಜನೆ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ಹೊಸ ಉತ್ತೇಜನ ನೀಡುವಂತಿದ್ದು, ಭವಿಷ್ಯದಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲು ಸಹ ನೆರವಾಗಲಿದೆ.

ಸುಮಾರು 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಈ ಕ್ರೀಡಾಂಗಣವು 80 ಸಾವಿರಕ್ಕೂ (largest cricket stadium in Anekal) ಅಧಿಕ ಪ್ರೇಕ್ಷಕರ ಆಸನ ಸಾಮರ್ಥ್ಯ ಹೊಂದಿದ್ದು, ದೇಶದ ಪ್ರಮುಖ ಕ್ರೀಡಾ ಕೇಂದ್ರಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುವ ನಿರೀಕ್ಷೆಯಿದೆ.
ಈ ಭವ್ಯ ಯೋಜನೆಗೆ ಸುಮಾರು 900 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಕರ್ನಾಟಕ ಗೃಹ ಮಂಡಳಿಯ ವತಿಯಿಂದ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
ಆಧುನಿಕ ತಂತ್ರಜ್ಞಾನ ಹಾಗೂ ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒಳಗೊಂಡ ಈ ಸ್ಟೇಡಿಯಂ (Stadium) ಕೇವಲ ಕ್ರಿಕೆಟ್ ಪಂದ್ಯಗಳಿಗೆ ಮಾತ್ರ ಸೀಮಿತವಾಗದೆ, ವಿವಿಧ ಕ್ರೀಡಾ ಚಟುವಟಿಕೆಗಳಿಗೆ ಸಹ ವೇದಿಕೆಯಾಗಲಿದೆ.
ಕಾರ್ಯಕ್ರಮದ ಸಂದರ್ಭದಲ್ಲಿ ಸ್ಥಳೀಯ ಶಾಸಕ ಆನೇಕಲ್ ಶಿವಣ್ಣ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಬೆಳ್ಳಿ ಗದೆ ನೀಡಿ ಗೌರವ ಸಲ್ಲಿಸಿದರು.
ಸಾಂಪ್ರದಾಯಿಕ ಕಲಾತಂಡಗಳು ಹಾಗೂ ಪೂರ್ಣಕುಂಭ ಸ್ವಾಗತದ ಮೂಲಕ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಯಿತು.
ಹೊಸ ಕ್ರೀಡಾಂಗಣದಲ್ಲಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬ್ಯಾಡ್ಮಿಂಟನ್ (Badminton) , ಬಾಸ್ಕೆಟ್ಬಾಲ್ (Basketball) , ವಾಲಿಬಾಲ್, ಕಬಡ್ಡಿ, ಜುಡೋ, ಟೈಕ್ವಾಂಡೋ, ಕುಸ್ತಿ ಸೇರಿದಂತೆ ಅನೇಕ ಕ್ರೀಡೆಗಳಿಗೆ ಪ್ರತ್ಯೇಕ ಅಖಾಡಗಳು ನಿರ್ಮಾಣವಾಗಲಿವೆ.
ಅಲ್ಲದೆ, ಈಜುಪಟುಗಳಿಗಾಗಿ ಅಂತರಾಷ್ಟ್ರೀಯ ಗುಣಮಟ್ಟದ ಒಲಂಪಿಕ್ ಗಾತ್ರದ ಈಜುಕೊಳ, ಹೈ ಡೈವಿಂಗ್ ಪೂಲ್ ಹಾಗೂ ಅಭ್ಯಾಸ ಕೊಳಗಳ ವ್ಯವಸ್ಥೆಯೂ ಇರಲಿದೆ.
ಇತ್ತೀಚೆಗೆ ಹೆಚ್ಚು ಜನಪ್ರಿಯವಾಗುತ್ತಿರುವ ಪಾಡೆಲ್ ಮತ್ತು ಪಿಕಲ್ಬಾಲ್ ಕ್ರೀಡೆಗಳಿಗೂ ಅತ್ಯಾಧುನಿಕ ಕೋರ್ಟ್ಗಳನ್ನು ನಿರ್ಮಿಸಲಾಗುತ್ತಿದೆ.
ಕ್ರೀಡಾಭಿಮಾನಿಗಳಿಗೆ ವಿಶಾಲ ಪಾರ್ಕಿಂಗ್, ಉಪಹಾರ ಗೃಹಗಳು, ವಾಣಿಜ್ಯ ಮಳಿಗೆಗಳು ಹಾಗೂ ಕ್ರೀಡಾ ಪರಿಕರಗಳ ಅಂಗಡಿಗಳಂತಹ ಸೌಲಭ್ಯಗಳನ್ನೂ ಒದಗಿಸಲಾಗುತ್ತಿದೆ.
ಈ ಯೋಜನೆ ಕೇವಲ ಕ್ರೀಡಾಂಗಣ ನಿರ್ಮಾಣಕ್ಕೆ ಸೀಮಿತವಾಗದೆ, ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೂ ಕಾರಣವಾಗಲಿದೆ. ಆಟಗಾರರು ಮತ್ತು ಕೋಚ್ಗಳಿಗಾಗಿ ವಸತಿ
ಗೃಹಗಳು, ಸಾರ್ವಜನಿಕ ಪ್ಲಾಜಾ, ಹಸಿರು ವಲಯ ಹಾಗೂ ತುರ್ತು ಅಗತ್ಯಗಳಿಗೆ ಹೆಲಿಪ್ಯಾಡ್ (Helipad) ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ.
ರಾಜ್ಯದ ಯುವ ಕ್ರೀಡಾಪಟುಗಳಿಗೆ ಜಾಗತಿಕ ಮಟ್ಟದ ತರಬೇತಿ ಸೌಲಭ್ಯ ದೊರೆಯುವ ಮೂಲಕ, ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕದ ಹೆಸರು ಮತ್ತಷ್ಟು
ಎತ್ತರಕ್ಕೆ ಏರಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ. ಈ ಕ್ರೀಡಾಂಗಣವು ಉದ್ಯೋಗಾವಕಾಶಗಳ ಸೃಷ್ಟಿಗೂ ಸಹ ಕಾರಣವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ ಪ್ರತಿಕ್ರಿಯಿಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) , ಸೂರ್ಯನಗರ ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಬೇಕೆಂಬುದು ರೈತರ ಬಹುಕಾಲದ ಕನಸಾಗಿತ್ತು ಎಂದು ಹೇಳಿದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಗಳ ಸಂದರ್ಭದಲ್ಲಿ ಎದುರಾದ ಜನಸಂದಣಿ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಹೊರವಲಯದಲ್ಲಿ ಮತ್ತೊಂದು ದೊಡ್ಡ ಕ್ರೀಡಾಂಗಣ ನಿರ್ಮಿಸುವ ಅಗತ್ಯತೆ ಇತ್ತು ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರದ ಅವಧಿಯಲ್ಲೇ ಈ ಮಹತ್ವಾಕಾಂಕ್ಷಿ ಯೋಜನೆ ಆರಂಭವಾಗುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು. ಮುಂದಿನ ಎರಡು ರಿಂದ ಮೂರು
ವರ್ಷಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡು, ಕರ್ನಾಟಕಕ್ಕೆ ಮತ್ತೊಂದು ವಿಶ್ವಮಟ್ಟದ ಕ್ರೀಡಾ ಸಂಕೀರ್ಣ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನು ಓದಿ : https://vijayatimes.com/ebola-fear-in-karnataka/