• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿನಿಮೀಯ ರೀತಿಯಲ್ಲಿ ವಕೀಲನ ಅಪಹರಣ

Preetham Kumar P by Preetham Kumar P
in ಪ್ರಮುಖ ಸುದ್ದಿ
ಸಿನಿಮೀಯ ರೀತಿಯಲ್ಲಿ ವಕೀಲನ ಅಪಹರಣ
1
SHARES
0
VIEWS
Share on FacebookShare on Twitter

ಬೆಂಗಳೂರು ಅ 2 : ಉದ್ಯಮಿ ಜೊತೆ ಸೇರಿ ಸಿನಿಮೀಯ ರೀತಿಯಲ್ಲಿ ವಕೀಲನನ್ನು ಕಿಡ್ನಾಪ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ 9 ಮಂದಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 20ರಂದು ನಾಗರಭಾವಿಯ‌ ಸ್ವಾತಿ ಹೋಟೆಲ್ ಬಳಿಯಿಂದ ವಕೀಲ‌ ಅಭಯ್ ರವೀಂದ್ರ ಕುಲಕರ್ಣಿ ಎಂಬುವವರನ್ನು ಕಿಡ್ನಾಪ್​ ಮಾಡಲಾಗಿತ್ತು. ಪ್ರಕರಣದ ನಡೆದ 12 ಗಂಟೆಯೊಳಗೆ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಅರುಣ್‌ಕುಮಾರ್‌, ಯುವರಾಜ್‌, ನರೇಶ್‌, ಅಶೋಕ್‌, ಯೋಗಾನಂದ್‌, ನೆಲ್ಸನ್‌ಕುಮಾರ್‌, ಸಂಜಯ್‌, ಸಿದ್ದೇಶ್‌ ಹಾಗೂ ವಿಜಯ್‌ಕುಮಾರ್‌ ಬಂಧಿತರು. ಬಂಧಿತರಲ್ಲಿ ಸಂಜಯ್‌, ಅರುಣ್‌ಕುಮಾರ್‌, ಅಶೋಕ್‌ ಹಾಗೂ ನರೇಶ್‌ ‘ಭರ್ಜರಿ’ ಸೇರಿದಂತೆ ಕೆಲ ಚಿತ್ರಗಳಲ್ಲಿ ನಟಿಸಿದ್ದರು. ಆದರೆ, ಆನಂತರ ಸಿನಿಮಾಗಳಲ್ಲಿ ಅವಕಾಶ ಸಿಗದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಅನ್ನಪೂರ್ಣೇಶ್ವರಿ ನಗರ ಪೊಲೀಸರು ತಿಳಿಸಿದ್ದಾರೆ.

ವಕೀಲ ರವೀಂದ್ರ ಕುಲಕರ್ಣಿ ಖಾಸಗಿ ಕಂಪನಿಯೊಂದರ ಲೀಗಲ್ ಅಡ್ವೈಸರ್​ ಆಗಿದ್ದರು. ಅದೇ ಕಂಪನಿಯಲ್ಲಿ ಅಂದ್ರಹಳ್ಳಿಯ ಸಿದ್ದೇಶ್ ಎಂಬುವವರು ಹಣ ಹೂಡಿಕೆ ಮಾಡಿದ್ದರು. ಬೇಸಿಕ್ ಜಾರ್ಜ್​ ಆಗಿ ರವೀಂದ್ರ ಅವರು ಸಿದ್ದೇಶ್​ನಿಂದ 6-7ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಹಣ ವಾಪಸ್​ ನೀಡದಿದ್ದಾಗ ಸಿದ್ದೇಶ್, ಸ್ಯಾಂಡಲ್​ವುಡ್ ಖಳನಟರಾದ ಸಂಜಯ್, ಅರುಣ್ ಹಾಗೂ ಅಶೋಕ್ ನರೇಶ್ ಸೇರಿ ರವೀಂದ್ರ ಅವರನ್ನು ಕಿಡ್ನಾಪ್​ ಮಾಡಿದ್ದಾನೆ.

ವಕೀಲ ರವೀಂದ್ರ ಅವರನ್ನು ಅಂದ್ರಹಳ್ಳಿಯ ಆಫೀಸ್​ನಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಬಳಿಕ ವಕೀಲರ ಮನೆಯವರಿಗೆ ಕರೆ ಮಾಡಿ 10 ಲಕ್ಷ ತರುವಂತೆ ಬೆದರಿಕೆ ಹಾಕಿ, ಲೋಕೇಶನ್​ ಕಳುಹಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ವೇಳೆಗೆ ಫೈನಾನ್ಸ್‌ ಕಚೇರಿ ಮೇಲೆ ದಾಳಿ ನಡೆಸಿದ ಪೊಲೀಸರು, ವಕೀಲನನ್ನು ರಕ್ಷಿಸಿದ್ದರ ಜತೆಗೆ, ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರ ಬಾವಿಯ ವಕೀಲ ಅಭಯ್‌ ಅವರಿಗೆ ಪರಿಚಿತನಾಗಿದ್ದ ಸಿದ್ದೇಶ್‌ ಹಣಕಾಸಿನ ವ್ಯವಹಾರ ಹೊಂದಿದ್ದ. ಖಾಸಗಿ ಕಂಪನಿಯೊಂದರಲ್ಲಿ ಕಾನೂನು ಸಮಾಲೋಚಕನಾಗಿದ್ದ ಅಭಯ್‌ಗೆ ಕಂಪನಿಯೊಂದರಲ್ಲಿ ಹೂಡಿಕೆಗಾಗಿ ಸಿದ್ದೇಶ್‌ ಹಣ ನೀಡಿದ್ದ ಎನ್ನಲಾಗಿದೆ ಮನೆಯವರು ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಸಂಜಯ್ ಎಂಬಾತ ಭರ್ಜರಿ ಸೇರಿದಂತೆ‌ ಕೆಲವು ಚಿತ್ರಗಳಲ್ಲಿ ನಟಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Tags: lawyer kidnap case

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.