ಬೆಂಗಳೂರು, ಜು. 22: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ದೊಡ್ಡಮಟ್ಟದ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಯಲಿದೆ.
ಭಾರೀ ನಿರೀಕ್ಷೆ ಮೂಡಿಸಿರುವ ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ದೊರೆಯುವ ಸಾಧ್ಯತೆ ಇದೆ. ಅಧಿಕಾರದಿಂದ ನಿರ್ಗಮಿಸುವ ಮುನ್ನ ಯಡಿಯೂರಪ್ಪ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳು ಇವೆ.
ಇಂದು ಸಂಜೆ 4 ಗಂಟೆಗೆ ನಡೆಯುವ ಸಭೆಯಲ್ಲಿ ತರಾತುರಿಯಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ನೀಡಿದರೆ ರಾಜ್ಯಪಾಲರಿಗೆ ದೂರು ಸಲ್ಲಿಸಲು ಸಹ ಯಡಿಯೂರಪ್ಪ ವಿರೋಧಿ ಬಣ ಚಿಂತನೆ ನಡೆಸುತ್ತಿದೆ.