• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವ್ಲಾಡಿಮೀರ್ ಹಾಫ್ಕಿನ್ ಅವರ ಸೇವೆ ನಮ್ಮ ನಾಯಕರುಗಳಿಗೆ ಆದರ್ಶವಾಗಲಿ: ಎಚ್.ಡಿ.ಕುಮಾರಸ್ವಾಮಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ವ್ಲಾಡಿಮೀರ್ ಹಾಫ್ಕಿನ್ ಅವರ ಸೇವೆ ನಮ್ಮ ನಾಯಕರುಗಳಿಗೆ ಆದರ್ಶವಾಗಲಿ: ಎಚ್.ಡಿ.ಕುಮಾರಸ್ವಾಮಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮಾ. 16: 120 ವರ್ಷಗಳ ಹಿಂದೆ ಕಾಲರಾ, ಪ್ಲೇಗ್ ಗಳಿಂದ ಭಾರತೀಯರನ್ನು ಕಾಪಾಡಿದ ವ್ಲಾಡಿಮೀರ್ ಹಾಫ್ಕಿನ್ ಅವರ ಸೇವೆ ನಮ್ಮ ನಾಯಕರುಗಳಿಗೆ ಆದರ್ಶವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 120 ವರ್ಷಗಳ ಹಿಂದೆ ಕಾಲರಾ,ಪ್ಲೇಗ್ ಗಳಿಂದ ಭಾರತೀಯರನ್ನು ಕಾಪಾಡಿದ ವ್ಲಾಡಿಮೀರ್ ಹಾಫ್ಕಿನ್ ಜನ್ಮದಿನ ಇಂದು. ಇಂದು ಜಗತ್ತು ಕೊರೋನಾ ವೈರಸ್ ದಾಳಿಯ ಭಯದಲ್ಲಿರುವಂತೆ ಈ ಹಿಂದೆಯೂ ಕಾಲರಾ, ಪ್ಲೇಗ್ ದಾಳಿಗೆ ತುತ್ತಾಗಿತ್ತು. ಇಂತಹ ಸಂಧರ್ಭದಲ್ಲಿ ಜೀವ ಭಯ ತೊರೆದು ದುಡಿದ ವೈದ್ಯ ವಿಜ್ಞಾನಿಗಳಲ್ಲಿ ರಷ್ಯಾದ ವ್ಲಾಡಿಮೀರ್ ಹಾಫ್ಕಿನ್ ಪ್ರಮುಖರು.

ಪ್ಯಾರಿಸ್-ಜಿನೇವಾಗಳಲ್ಲಿಯೂ ಕಾರ್ಯ ನಿರ್ವಹಿಸಿದ ಅವರು ಯೂರೋಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಸಾಂಕ್ರಾಮಿಕ ರೋಗಗಳಿಗೆ ಲಸಿಕೆ ಕಂಡು ಹಿಡಿಯಲು ಆಸಕ್ತಿ ವಹಿಸಿದ್ದರು. 1892ರಲ್ಲಿ ತಾವು ಅನ್ವೇಷಿಸಿದ ಕಾಲರಾ ಲಸಿಕೆಯನ್ನು ಪರೀಕ್ಷಿಸಲಿಕ್ಕಾಗಿ ಮೊದಲ ಬಾರಿ ತಮ್ಮ ದೇಹಕ್ಕೆ ಚುಚ್ಚಿಕೊಂಡಿದ್ದ ಮಹಾನುಭಾವರು ಇವರು. ಅದೇ ಸಂಧರ್ಭದಲ್ಲಿ ಭಾರತದಲ್ಲಿ ಕಾಲರಾ ಮರಣ ಮೃದಂಗ ಬಾರಿಸುತ್ತಿತ್ತು. ಬ್ರಿಟೀಷ್ ವೈಸ್ ರಾಯ್ ಫ್ರೆಡೆರಿಕ್ ಹ್ಯಾಮಿಲ್ಟನ್ ಮೂಲಕ ಭಾರತಕ್ಕೆ ಆಗಮಿಸಿದ ಅವರು ಸುಮಾರು 45000 ಜನರಿಗೆ ಕಾಲರಾ ಚುಚ್ಚುಮದ್ದು ನೀಡಿ ಶೆ.70ರಷ್ಟು ಸಾವು ನೋವು ತಪ್ಪಿಸಿ ಭಾರತೀಯರ ಪಾಲಿಗೆ ಆಪದ್ಬಾಂಧವರಾಗಿದ್ದರು.

ಮಹಾರಾಷ್ಟ್ರದ ಬೈಕುಲಾದಲ್ಲಿ ಪ್ರಯೋಗಾಲಯ ತೆರೆದು ಹಲವು ಸಂಶೋಧನೆಗಳಲ್ಲಿ ತೊಡಗಿಕೊಂಡಿದ್ದರು. 1902-03ರ ಸುಮಾರಿನಲ್ಲಿ ಪ್ಲೇಗ್ ಮಾರಿ ಭಾರತವನ್ನು ಕಾಡಿದಾಗ ಸುಮಾರು 5,00,000 ಮಂದಿಗೆ ಇವರು ಕಂಡು ಹಿಡಿದ ಲಸಿಕೆ ಜೀವದಾನ ಮಾಡಿತು. ಇಂದಿಗೂ ಇಂತಹ ಅನೇಕ ಮಹನೀಯರ ಋಣದಲ್ಲಿ ನಾವಿದ್ದೇವೆ. ಆದರೆ ಇಂತಹ ವಿಜ್ಞಾನಿಗಳ ಸೇವೆಯನ್ನು ನಾವಾಗಲಿ, ನಾವೇ ಆರಿಸಿದ ಈಗಿನ ನಮ್ಮ ಜನಸೇವಕರಾಗಲಿ ನೆನಪಿಸಿಕೊಳ್ಳುತ್ತಿದ್ದೇವೆಯೆ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ಹಣದಲ್ಲಿ ಜಾತಿಗೊಬ್ಬ ನಾಯಕರ ಜಯಂತಿ ಆಚರಿಸುವ, ನಮ್ಮ ಮತ-ನಮ್ಮ ದೇವರು ಮೇಲು, ನಿಮ್ಮ ಮತ-ನಿಮ್ಮ ದೇವರು ಕೀಳು ಎಂದು ಬೇಧ-ಭಾವ ಮಾಡುತ್ತಾ ಯುದ್ದೋನ್ಮಾದದಲ್ಲಿ ತೇಲುತ್ತಿರುವ ನಮಗೆ, ಕಾಲರಾ, ಪ್ಲೇಗ್, ಕೊರೋನಾ ಮೊದಲಾದ ದೊಡ್ಡ ರೋಗಗಳು ಮೆತ್ತಿಕೊಂಡಾಗ ನೆರವಿಗೆ ಬರುವುದು ಇಂತಹ ನಿಸ್ವಾರ್ಥ ವಿಶ್ವಮಾನವರು ತಮ್ಮ ಜೀವವನ್ನು ಪಣಕ್ಕಿಟ್ಟು ಕಂಡು ಹಿಡಿದ ಲಸಿಕೆಗಳು ಮಾತ್ರ. ಹೀಗಾಗಿ ನಮ್ಮ ಮುತ್ತಾತಂದಿರನ್ನು ಕಾಲರಾ, ಪ್ಲೇಗ್ ದಾಳಿಯಿಂದ ರಕ್ಷಿಸಿ ಇಂದು ನಮ್ಮ ಇರುವಿಕೆಗೆ ಕಾರಣರಾಗಿರುವ ಹಾಫ್ಕಿನ್ ರವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ನಾಯಕರುಗಳಿಗೆ ಇವರ ಸೇವೆ ಆದರ್ಶವಾಗಲಿ ಎಂದಿದ್ದಾರೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.