- ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ರಾಮಲಿಂಗಾ ರೆಡ್ಡಿ ಆಶ್ವಾಸನೆ
- ಮುಷ್ಕರವನ್ನು ಹಿಂಪಡೆದ ಲಾರಿ ಮಾಲೀಕರು (Lorry owners call off strike)
- ಡೀಸೆಲ್ ಬೆಲೆ ಕಡಿಮೆ ಮಾಡಲು ಹಾಗೂ ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಗಳನ್ನು ತೆಗೆಯುವದರ ಹೊರತಾಗಿ ಉಳಿದೆಲ್ಲ ಬೇಡಿಕೆಗಳಿಗೆ ಸ್ಪಂದಿಸಲಿರುವ ಸರ್ಕಾರ
Bengaluru: ಕಳೆದ ಮೂರು ದಿನಗಳಿಂದ ಡೀಸೆಲ್ ದರ ಇಳಿಕೆ (Diesel price) ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ (Protest) ನಡೆಸುತ್ತಿದ್ದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘ (Agents Association) ಕೊನೆಗೂ ಮುಷ್ಕರವನ್ನು ವಾಪಸ್ ತೆಗೆದುಕೊಂಡಿದೆ.
ಲಾರಿ ಮಾಲೀಕರ ಬೇಡಿಕೆ ಈಡೇರಿಸುವ ಸಂಬಂಧ ನಿನ್ನೆ ಸಚಿವ ರಾಮಲಿಂಗಾರೆಡ್ಡಿ (Minister Ramalingareddy) ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಸಚಿವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಲಾರಿ ಮಾಲೀಕರು (Lorry owner) ಮುಷ್ಕರವನ್ನು ಹಿಂಪಡೆದಿದ್ದಾರೆ.

ಡೀಸೆಲೆ ಬೆಲೆ ಇಳಿಕೆ ಹಾಗೂ ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ (Tolls on state highways) ಗಳನ್ನು ತೆಗೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘ ಕಳೆದ ಮೂರು ದಿನಗಳಿಂದ ಮುಷ್ಕರ ನಡೆಸುತಿತ್ತು.ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಹಾಗೂ ರೆಡ್ಡಿ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾಗಿತ್ತು.
ಆದರೆ ಇಂದು ರಾಮಲಿಂಗಾರೆಡ್ಡಿ ಅವರೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಲಾರಿ ಮುಷ್ಕರವನ್ನು ವಾಪಸ್ ಪಡೆಯುತ್ತಿರುವುದಾಗಿ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಪಿಟಿಐ (President Shanmugappa PTI) ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಡೀಸೆಲ್ ಬೆಲೆ ಕಡಿಮೆ ಮಾಡಲು ಅಥವಾ ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ (Tolls on state highways) ಗಳನ್ನು ತೆಗೆಯಲು ಸರ್ಕಾರ ಒಪ್ಪಿಲ್ಲ. ಆದಾಗ್ಯೂ, ಕೆಲವೊಂದು ಇತರ ಕುಂದುಕೊರತೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಲಾಗಿದೆ.ಒಟಿಎಸ್ (OTS) ಮಾದರಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸುವಂತೆ ಕೇಳಿದ್ದಾರೆ.
ಇದನ್ನೂ ಓದಿ: http://ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ 2 ರೂಪಾಯಿ ಏರಿಕೆ, ಗಾಯದ ಮೇಲೆ ಬರೆ ಎಳೆದ ಸರ್ಕಾರ!
ಅದನ್ನು ಸಿಎಂ (CM) ಗಮನಕ್ಕೆ ತರಲಿದ್ದೇವೆ ಹಾಗೂ ಟೋಲ್ ವಿಚಾರವನ್ನೂ ಸಿಎಂ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ (Lorry owners call off strike) ಮುಷ್ಕರದಿಂದ ದಿನಕ್ಕೆ 4,500 ಕೋಟಿ ರೂ.ಗಿಂತಲೂ ಅಧಿಕ ನಷ್ಟವಾಗಿದೆ ಎಂದು ಹೇಳಿದರು.ಹೀಗಾಗಿ ಲಾರಿ ಮುಷ್ಕರವನ್ನು (Lorry strike) ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.