• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತೀಯ ಸೇನೆಯ ನಂ. 2 ಸ್ಥಾನಕ್ಕೆ ಕನ್ನಡಿಗ ಲೆ.ಜ. ರಾಜು ನೇಮಕ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
BS Raju
0
SHARES
0
VIEWS
Share on FacebookShare on Twitter

ಭಾರತೀಯ ಸೇನೆಯ(Indian Army) ಉಪಮುಖ್ಯಸ್ಥರಾಗಿ ಕರ್ನಾಟಕದ ಬಗ್ಗವಳ್ಳಿ ಸೋಮಶೇಖರ್ ರಾಜು(Bhaggavalli Somashekar Raju) ಅವರು ನೇಮಕವಾಗಿದ್ದಾರೆ.

Lt BS Raju

ಈ ಮೂಲಕ ಭಾರತೀಯ ಸೇನೆಯ ನಂಬರ್ 2 ಸ್ಥಾನ ಕನ್ನಡಿಗರಿಗೆ ದಕ್ಕಿದೆ. ಅನೇಕ ವರ್ಷಗಳ ನಂತರ ಭಾರತೀಯ ಸೇನೆಯಲ್ಲಿ ಉನ್ನತ ಸ್ಥಾನಕ್ಕೇರಿದ ಕೀರ್ತಿ ಲೆ.ಜ. ರಾಜು ಸಲ್ಲುತ್ತದೆ. ಈ ಹಿಂದೆ ಬಾಗಲಕೋಟೆಯ ಲೆ.ಜ. ರಮೇಶ್ ಹಲಗಲಿ ಅವರು ಭಾರತೀಯ ಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಭಾರತೀಯ ಸೇನೆಯಲ್ಲಿ ಅತ್ಯಂತ ಉನ್ನತ ಹುದ್ದೆಗೆ ಲೆ.ಜ. ರಾಜು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ : https://vijayatimes.com/asaduddin-owaisi-cried-on-stage/

ಇನ್ನು ಚಿಕ್ಕಮಗಳೂರು ಜಿಲ್ಲೆಯವರಾದ ಸೋಮಶೇಖರ್ ರಾಜು ಅವರು, ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ. ಸೈನಿಕ ಶಾಲೆಯ ಮೂಲಕ ಎನ್‍ಡಿಎ ಪರೀಕ್ಷೆ ಪಾಸು ಮಾಡಿ, ಪುಣೆಯ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯಲ್ಲಿ ಪದವಿ ಪೂರೈಸಿದ ನಂತರ 1984 ಡಿ. 15ರಂದು ಜಾಟ್ ರೆಜಿಮೆಂಟ್‍ನಲ್ಲಿ ತಮ್ಮ ಸೇವೆಯನ್ನು ಪ್ರಾರಂಭಿಸಿದ್ದರು. ಕಾಶ್ಮೀರ ಕಣಿವೆಯುದ್ದಕ್ಕೂ ನಡೆದ ವಿಶೇಷ ಕಾರ್ಯಾಚರಣೆಗಳ ಮೇಲ್ವಿಚಾರಣೆಯನ್ನು ಲೆ.ಜ. ರಾಜು ನಡೆಸಿದ್ದರು.

indian army

ಲೆ.ಜ. ರಾಜು ಅವರು ಸದ್ಯ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ ಪೂರ್ವ ಲಡಾಕ್‍ನ ಸಂಪೂರ್ಣ ಸೇನಾ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಪರಾಕ್ರಮ’ ಕಾರ್ಯಾಚರಣೆಯ ನೇತೃತ್ವವನ್ನು ಲೆ.ಜ. ರಾಜು ವಹಿಸಿಕೊಂಡಿದ್ದರು. ಕಾಶ್ಮೀರ ಕಣಿವೆಯಲ್ಲಿನ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಲೆ.ಜ. ರಾಜು ಯಶಸ್ವಿಯಾಗಿದ್ದರು.

ಇದನ್ನೂ ಓದಿ : https://vijayatimes.com/rajasthan-rape-incident/

ಇನ್ನು ಲೆ.ಜ. ರಾಜು ಅವರು ಸುಧೀರ್ಘ 38 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಭಾರತೀಯ ಸೇನಾ ಮುಖ್ಯಸ್ಥರಾಗಿರುವ ಎಂ.ಎಂ ನರಾವಣೆ ಅವರು ನಿವೃತ್ತರಾಗಲಿದ್ದು, ಆ ಸ್ಥಾನವನ್ನು ಉಪಸೇನಾಮುಖ್ಯಸ್ಥರಾಗಿರುವ ಮನೋಜ್ ಪಾಂಡೆ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ ಉಪಸೇನಾಮುಖ್ಯಸ್ಥರಾಗಿ ಕನ್ನಡಿಗ ಲೆ.ಜ. ರಾಜು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮೇ 1ರಂದು ಲೆ.ಜ. ರಾಜು ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Tags: armychiefBSRajuIndiaindianarmyKarnataka

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.