• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಉ.ಪ್ರದ ಗ್ಯಾಂಗ್‌ಸ್ಟರ್ ಅಹ್ಮದ್‌ ಸಹೋದರರ ಹತ್ಯೆ ಮಾಡಿದವರಲ್ಲಿ ಒಬ್ಬ 18ರ ಯುವಕ: ಇವನಿಗೇನಿತ್ತು ಅಂಥಾ ದ್ವೇಷ?

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ
ಉ.ಪ್ರದ ಗ್ಯಾಂಗ್‌ಸ್ಟರ್ ಅಹ್ಮದ್‌ ಸಹೋದರರ ಹತ್ಯೆ ಮಾಡಿದವರಲ್ಲಿ ಒಬ್ಬ 18ರ ಯುವಕ: ಇವನಿಗೇನಿತ್ತು ಅಂಥಾ ದ್ವೇಷ?
0
SHARES
264
VIEWS
Share on FacebookShare on Twitter
Lucknow (Uttar Pradesh): ಈ ಶೂಟೌಟ್‌ (Shootout) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು ! ಪೊಲೀಸರ ವಶದಲ್ಲಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಗಳಾದ ಅತೀಕ್ ಅಹ್ಮದ್ (Atiq Ahmed) ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ  (lucknow shoot out) ಶನಿವಾರ ಪ್ರಯಾಗ್‌ರಾಜ್‌ನಲ್ಲಿ ಕರೆದೊಯ್ಯುವಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

 ಮಾಧ್ಯಮಗಳ ಜೊತೆ ಮಾಡುತ್ತಿದ್ದಾಗ ಮಾಧ್ಯಮದವರ ರೀತಿ ವೇಷ ಹಾಕಿದ ದುಷ್ಕರ್ಮಿಗಳು ಅಹ್ಮದ್ ಸೋದರರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ರು.
lucknow shoot out


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಲವಲೇಶ್ ತಿವಾರಿ (Lavalesh Tiwari) (22), ಸನ್ನಿ ಸಿಂಗ್ (Sunny Singh) (23), ಅರುಣ್ ಮೌರ್ಯ (Arun Maurya) (18) ಎಂದು ಗುರುತಿಸಲಾಗಿದೆ.

ಈ ಪೈಕಿ ಅರುಣ್‌ ಮೌರ್ಯನಿಗೆ ಕೇವಲ 18 ವರ್ಷ ವಯಸ್ಸು. ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್‌ನನ್ನು ಕೊಂದ ಬಳಿಕ “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದ್ರು ಈ ಆರೋಪಿಗಳು.

ಇನ್ನು ಹದಿಹರೆಯದ ವಯಸ್ಸಿನ ಈ ಯುವಕರು ಅಹ್ಮದ್ ಸಹೋದರರನ್ನು ಯಾಕೆ ಕೊಲೆ ಮಾಡಿದ್ರು? ಇವರಿಗೂ ಅತೀಕ್ ಅಹ್ಮದ್ ಮತ್ತು ಅವರ ಸಹೋದರ (lucknow shoot out) ಅಶ್ರಫ್ ಅಹ್ಮದ್ ಸಹೋದರರಿಗೂ ಇರುವ ದ್ವೇಷ ಏನು?

ಎಂದು ಪೊಲೀಸರು ವಿಚಾರಣೆ ಮಾಡಿದಾಗ, ಅತೀಕ್ ಅಹ್ಮದ್‌ನನ್ನು ಕೊಂದು ತಾವು ದೊಡ್ಡ ಗ್ಯಾಂಗ್‌ಸ್ಟರ್‌ ಎನಿಸಿಕೊಳ್ಳಬೇಕು ಅನ್ನೋ ಉದ್ದೇಶವಿತ್ತು ಅಂತ ಹೇಳಿಕೊಂಡಿದ್ದಾರೆ.


ಈ ಆರೋಪಿಗಳು ರಾತ್ರಿ 10 ಗಂಟೆ ಸುಮಾರಿಗೆ ಧೂಮಂಗಂಜ್ (Dhoomanganj) ಪೊಲೀಸ್ ಠಾಣೆ ಬಳಿ ಅತಿಕ್ (Atiq) ಮತ್ತು ಆತನ ಸಹೋದರ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಮಾಧ್ಯಮ ಪ್ರತಿನಿಧಿಗಳಂತೆ ನಟಿಸಿ ಬಂದ ಈ ಆರೋಪಿಗಳು ಅಹ್ಮದ್‌ ಸಹೋದರರ ಮೇಲೆ ಪೊಲೀಸ್‌ ಭದ್ರತೆಯ ನಡುವೆಯೇ ಹತ್ತಿರದಿಂದಲೇ ಗುಂಡು ಹಾರಿಸಿದರು.


ಘಟನೆಯ ಕುರಿತು ತನಿಖೆ ನಡೆಸಲು ನ್ಯಾಯಾಂಗ ಆಯೋಗ ರಚಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಆದೇಶಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಗುಂಡಿನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ

ಅಖಿಲೇಶ್ ಯಾದವ್ (Akhilesh Yadav),ಯುಪಿಯಲ್ಲಿ ಅಪರಾಧವು ಉತ್ತುಂಗಕ್ಕೇರಿದೆ ಮತ್ತು “ಅಪರಾಧಿಗಳ ನೈತಿಕತೆ ಹೆಚ್ಚಾಗಿದೆ” ಎಂದು ಹೇಳಿದರು.

lucknow shoot out


”ಪೊಲೀಸ್ ಸಿಬ್ಬಂದಿಯ ಭದ್ರತಾ ಸರಹದ್ದಿನ ನಡುವೆಯೇ ಕೆಲವರನ್ನು ಗುಂಡಿಕ್ಕಿ ಹತ್ಯೆಗೈದರೆ ಸಾರ್ವಜನಿಕರ ಸುರಕ್ಷತೆಯೇನು?.ಇದರಿಂದ ಸಾರ್ವಜನಿಕರಲ್ಲಿ ಭಯದ

ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ನಿರ್ಮಿಸುತ್ತಿದ್ದಾರೆ. “ಎಂದು ಯಾದವ್ (Yadav) ಹೇಳಿದರು.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ರವರು (Yogi Adityanath) ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಇಡೀ ಉತ್ತರ ಪ್ರದೇಶದ ಪೊಲೀಸ್ ಇಲಾಖೆಯು ಚುರುಕಾಗಿದೆ.

ಆರೋಪಿಗಳ ಕುಟುಂಬಸ್ಥರನ್ನೂ ಪತ್ತೆ ಹಚ್ಚಿ ಅವರಿಂದಲೂ ಮಾಹಿತಿ ಕಲೆ ಹಾಕಲಾಗುತ್ತಿದೆ.

ಇದೀಗ ಪೊಲೀಸರ ವಶದಲ್ಲಿ ಇರುವ ಮೂವರು ಆರೋಪಿಗಳಾದ ಸನ್ನಿ ಸಿಂಗ್, ಲವಲೇಶ್ ತಿವಾರಿ, ಹಾಗೂ ಅರುಣ್ ಮೌರ್ಯ ತಾವು ದೊಡ್ಡ ಗ್ಯಾಂಗ್‌ಸ್ಟರ್‌ (Gangster) ಗಳಾಗಬೇಕೆಂಬ ಮಹದಾಸೆಯೊಂದಿಗೆ ಅತೀಕ್‌ನನ್ನು ಕೊಂದಿದ್ದಾಗಿ ಸ್ವತಃ ಹೇಳಿಕೊಂಡಿದ್ದಾರೆ.

ಇನ್ನು ಮೂವರೂ ಆರೋಪಿಗಳ ವಿರುದ್ಧ ಹಲವು ಅಪರಾಧ ಪ್ರಕರಣಗಳಿದ್ದು, ವರ್ಷಗಳ ಹಿಂದೆಯೇ ತಮ್ಮ ಕುಟುಂಬದಿಂದ ದೂರವಾಗಿದ್ದರು.

Tags: gangsterLucknowshootout

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.