ಯುಗಾದಿ ಹಬ್ಬಕ್ಕಿಲ್ಲ ಮಾದಪ್ಪನ‌ ದರ್ಶನ: ಮಲೆ‌ ಮಹದೇಶ್ವರ ಜಾತ್ರೆಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಚಾಮರಾಜನಗರ, ಏ.05: ಕೋವಿಡ್-‌19 ನಿಯಂತ್ರಣಕ್ಕಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಯುಗಾದಿ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಏಪ್ರಿಲ್ 10 ರಿಂದ 13 ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಅವಧಿಯಲ್ಲಿ ಹೊರಗಿನಿಂದ ಬೆಟ್ಟಕ್ಕೆ ಆಗಮಿಸುವ ಜನರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಟ್ಟದಲ್ಲಿನ ನಿವಾಸಿಗಳು ಹಾಗೂ ಕೆಲಸದ ಮೇಲೆ ಬೆಟ್ಟಕ್ಕೆ ತೆರಳುವ ಅಧಿಕಾರಿಗಳಿಗೆ ಮಾತ್ರ ಬೆಟ್ಟಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಬೆಟ್ಟಕ್ಕೆ ಜನರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸಿಗೆ ಕೊರೊನಾ ಪಾಸಿಟಿವ್
ಈ ನಡುವೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲಾಧಿಕಾರಿಗೆ ಎರಡು ದಿನಗಳ ಹಿಂದೆ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿತ್ತು. ಭಾನುವಾರ ಫಲಿತಾಂಶ ಪಾಸಿಟಿವ್ ಬಂದಿದೆ. ಸದ್ಯ ಎಂ.ಆರ್.ರವಿ ಅವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವನ್ನು ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

Exit mobile version