`ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಲೋಕಾರ್ಪಣೆ!

ಬಂಗಾರದ ಮನುಷ್ಯ ಚಿತ್ರವು ಕನ್ನಡ ಚಿತ್ರರಂಗದಲ್ಲಿ ಮಾತ್ರ ಅಲ್ಲ, ಒಟ್ಟು ಕನ್ನಡಿಗರಲ್ಲಿ ಹೊಸ ಕ್ರಾಂತಿ ಮೂಡಿಸಿದ ಸಿನಿಮಾ. ಈ ಕುರಿತು ಮೇಕಿಂಗ್ ಆಫ್ ಬಂಗಾರದ ಮನುಷ್ಯ' ಕೃತಿಯನ್ನು ಪತ್ರಕರ್ತ ಮಹೇಶ್ ದೇವಶೆಟ್ಟಿ ಬರೆದಿದ್ದಾರೆ. ಈ ಪುಸ್ತಕವನ್ನು ಇತ್ತೀಚೆಗಷ್ಟೇಪಬ್ಲಿಕ್ ಟಿವಿ’ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಬಿಡುಗಡೆ ಮಾಡಿದ್ದಾರೆ.

ಆಗಿನ ಕಾಲದ ಯುವ ಸಮುದಾಯದಲ್ಲಿ ಹೊಸ ಕ್ರಾಂತಿಯನ್ನೇ ಮೂಡಿಸಿದ ಬಂಗಾರದ ಮನುಷ್ಯ ಚಿತ್ರದ ಪ್ರತಿಯೊಂದು ಘಟನೆಯೂ ವಿಸ್ಮಯ ಮೂಡಿಸುವಂಥದ್ದು. ಹಿಂದೆಂದೂ ಕಂಡು ಕೇಳಿರದ ಮಾಹಿತಿಯನ್ನು ಒಳಗೊಂಡ ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಪುಸ್ತಕ ಲೋಕಾರ್ಪಣೆಯಾಗಿದೆ. ಕನ್ನಡ ಸಿನಿಮಾ ರಂಗದ ಪತ್ರಕರ್ತ ಮಹೇಶ್ ದೇವಶೆಟ್ಟಿ ಬರೆದಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಸಾಕಷ್ಟು ರೋಚಕ ಹಾಗೂ ವಿಶಿಷ್ಟ ಮಾಹಿತಿಗಳನ್ನು ಒಳಗೊಂಡಿದೆ. ಪ್ರಸ್ತುತ ಮಹೇಶ್ ದೇವಶೆಟ್ಟಿ ಪಬ್ಲಿಕ್ ಟಿವಿ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂದ ಹಾಗೆ `ಮೇಕಿಂಗ್ ಆಫ್ ಬಂಗಾರದ ಮನುಷ್ಯ’ ಕೃತಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಬೆನ್ನುಡಿ ಬರೆದು ಶುಭ ಕೋರಿದ್ದಾರೆ.

Exit mobile version