ಪ್ರಧಾನಿ ಮೋದಿ ಎಲ್ಲಾ ಕಡೆ ಹೋಗ್ತಾರೆ ಆದರೆ ಮಣಿಪುರಕ್ಕೆ ಯಾಕೆ ಹೋಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Dehli: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶಾದ್ಯಂತ ಪ್ರವಾಸ ಮಾಡುತ್ತಿದ್ದರೂ ಮಣಿಪುರಕ್ಕೆ (Manipur) ಮಾತ್ರ ಯಾಕೆ ಭೇಟಿ ನೀಡುತ್ತಿಲ್ಲ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ (Rahul Gandhi) ಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಒಳನೋಟಗಳನ್ನು ಹಂಚಿಕೊಂಡಿದ್ದು ನಾವು ಸಂಸತ್ತಿನಲ್ಲಿ ರಾಷ್ಟ್ರೀಯ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದಾಗ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಯಿತು. 146 ಸಂಸದರನ್ನು ಅಮಾನತುಗೊಳಿಸಿರುವುದು ಅಚ್ಚರಿ ಎಂದು ಅಖಿಲ ಭಾರತ ಕಾಂಗ್ರೆಸ್ (Congress) ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಮಣಿಪುರಕ್ಕೆ ಯಾಕೆ ಹೋಗುತ್ತಿಲ್ಲ?
ಪ್ರಧಾನಿ ಮೋದಿ (Modi) ಅವರು ಬೀಚ್‌ಗೆ ಹೋದರು. ನೀರಿನಲ್ಲಿ ಈಜುವ ಫೋಟೋ ಸೆಷನ್ ಮಾಡಿದರು. ದೇವಾಲಯದ ನಿರ್ಮಾಣ ಸ್ಥಳದಲ್ಲಿ ಫೋಟೋ ತೆಗೆಸಿಕೊಂಡರು.ಕೇರಳ ಮತ್ತು ಮುಂಬೈಗೆ (Mumbai) ಹೋಗಿದ್ದರು. ಅವರು ಎಲ್ಲಾ ಕಡೆ ಹೋಗುತ್ತಾರೆ. ಅವರ ಫೋಟೊಗಳನ್ನು ನೀವು ಎಲ್ಲೆಲ್ಲೂ ನೋಡಬಹುದಾಗಿದ್ದು, ಮಣಿಪುರದಲ್ಲಿ ಒಂದು ದುರದೃಷ್ಟಕರ ಘಟನೆ ಸಂಭವಿಸಿದೆ ಆದರೆ ಈ ಮಹಾನ್ ವ್ಯಕ್ತಿ ಮಣಿಪುರಕ್ಕೆ ಯಾಕೆ ಹೋಗಲಿಲ್ಲ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ
ಜನವರಿ (January) 14 ರಿಂದ ಪ್ರಾರಂಭವಾಗುವ ಮಹತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾಗುವುದು. ಮಣಿಪುರದ ಇಂಫಾಲ್‌ನಿಂದ ಆರಂಭವಾಗುವ ಈ ಪ್ರಯಾಣವು ನಾಗಾಲ್ಯಾಂಡ್ (Nagaland), ಅಸ್ಸಾಂ, ಅರುಣಾಚಲ ಸೇರಿದಂತೆ 15 ರಾಜ್ಯಗಳಲ್ಲಿ ಸಂಚರಿಸಿ ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಸರಿಸುಮಾರು 6700 ಕಿ.ಮೀ. ‘ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nay Yatra)’ಯ ಗಮನವು ರಾಷ್ಟ್ರವು ಎದುರಿಸುತ್ತಿರುವ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿದೆ ಎಂದಿದ್ದಾರೆ. 110 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಈ ಯಾತ್ರೆಯು 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.

ಭವ್ಯಶ್ರೀ ಆರ್ ಜೆ

Exit mobile version