• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚುನಾವಣಾ ಪ್ರಚಾರಕ್ಕೆ ತೆರೆ ಬೀಳುವ ಮುನ್ನ ‘ನನ್ನದು ಶಾಂಡಿಲ್ಯ ಗೋತ್ರ’ ಎಂದ ಮಮತಾ ಬ್ಯಾನರ್ಜಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಚುನಾವಣಾ ಪ್ರಚಾರಕ್ಕೆ ತೆರೆ ಬೀಳುವ ಮುನ್ನ ‘ನನ್ನದು ಶಾಂಡಿಲ್ಯ ಗೋತ್ರ’ ಎಂದ ಮಮತಾ ಬ್ಯಾನರ್ಜಿ
0
SHARES
0
VIEWS
Share on FacebookShare on Twitter

ಕೊಲ್ಕತ್ತಾ, ಮಾ. 31: ಪಶ್ಚಿಮ ಬಂಗಾಳದ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಮಂಗಳವಾರ ರಾತ್ರಿ ತೆರೆಬಿದ್ದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ನಂದಿಗ್ರಾಮದಲ್ಲಿಯೇ ಪ್ರಚಾರ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮಂಗಳವಾರ ತಮ್ಮ ಗೋತ್ರದ ಬಗ್ಗೆ ಮಾತನಾಡಿದ್ದಾರೆ. ನಾನು ಎರಡನೇ ಹಂತದ ಮತದಾನಕ್ಕೆ ಪ್ರಚಾರ ನಡೆಸುತ್ತಿದ್ದಾಗ ದೇವಾಲಯವೊಂದಕ್ಕೆ ಭೇಟಿ ನೀಡಿದ್ದೆ. ಅಲ್ಲಿನ ಅರ್ಚಕರು ನನ್ನಲ್ಲಿ ಗೋತ್ರ ಯಾವುದು ಎಂದು ಕೇಳಿದಾಗ ನಾನು ‘ಮಾ ಮಾಟಿ ಮನುಷ್’ (ಅಮ್ಮ, ಭೂಮಿ, ಮನುಷ್ಯ) ಎಂದು ಹೇಳಿದೆ. ನಾನು ತ್ರಿಪುರಾದ ತ್ರಿಪುರೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದಾಗ ಅಲ್ಲಿನ ಅರ್ಚರರು ನನ್ನಲ್ಲಿ ಗೋತ್ರ ಯಾವುದು ಎಂದು ಕೇಳಿದರು. ನಾನು ಅಲ್ಲಿಯೂ ಮಾ- ಮಾಟಿ – ಮನುಷ್ ಎಂದೆ. ನಿಜವಾಗಿಯೂ ನಾನು 8 ಬ್ರಾಹ್ಮಣ ಗೋತ್ರಗಳ ಪೈಕಿ ‘ಶಾಂಡಿಲ್ಯ’ ಗೋತ್ರದವಳು ಎಂದಿದ್ದಾರೆ ಮಮತಾ.

ಚುನಾವಣಾ ಪ್ರಚಾರದ ವೇಳೆ ಗೋತ್ರ ಬಹಿರಂಗಪಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಮಮತಾ ನಿರಾಶೆಯಲ್ಲಿದ್ದಾರೆ. ನಾನು ಯಾವತ್ತೂ ಗೋತ್ರ ಹೇಳಿಲ್ಲ, ನಾನು ಬರೆದು ತೋರಿಸುತ್ತೇನೆ. ಚುನಾವಣೆ ಸೋಲುವ ಭಯದಿಂದ ಅವರು ಇದನ್ನು ಹೇಳುತ್ತಿದ್ದಾರೆ. ಈ ಚುನಾವಣೆಯಲ್ಲಿ ಮಮತಾ ಅವರ ಸೋಲು ಖಚಿತ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಗೋತ್ರ ಬಹಿರಂಗದ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಇಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಶಾಂಡಿಲ್ಯ ಅಥವಾ ಜನೇವುಧಾರಿ (ಜನಿವಾರ ಧರಿಸಿದರು) ಅಲ್ಲದೇ ಇರುವ ನಮ್ಮಂಥವರ ಕತೆ ಏನು? ನಾವು ನಿರ್ದಿಷ್ಟ ದೇವರ ಭಕ್ತರಲ್ಲ. ನಾನು ಯಾವುದೇ ಚಾಲೀಸಾ ಅಥವಾ ಮಂತ್ರ ಪಠಿಸುವುದಿಲ್ಲ. ಎಲ್ಲ ಪಕ್ಷಗಳು ಗೆಲ್ಲುವುದಕ್ಕಾಗಿ ಹಿಂದೂ ಎಂಬುದನ್ನು ತೋರಿಸುತ್ತದೆ. ಇದು ಅಶಿಸ್ತು, ಅವಮಾನಕರ ಮತ್ತು ಇದು ಗೆಲುವಿನತ್ತ ಕೊಂಡೊಯ್ಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ನಾಲ್ಕು ಜಿಲ್ಲೆಗಳ 30 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 1ರಂದು ಚುನಾವಣೆ ನಡೆಯಲಿದ್ದು, ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ. ನಂದಿಗ್ರಾಮ ಸುವೇಂದು ಅವರ ತವರು ಆಗಿದ್ದರೂ, ಭೂಸ್ವಾಧೀನದ ವಿರುದ್ಧ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರು ಗೆಲುವು ಸಾಧಿಸಿದ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಪಾಲಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.