ಕೋರ್ಟ್​ ಮೊರೆ ಹೋಗಲಿದ್ದಾರಾ ಮಮತಾ ಬ್ಯಾನರ್ಜಿಿ?

ಕೋಲ್ಕತ್ತಾ, ಮೇ. 02: ಪಶ್ಚಿಮ ಬಂಗಾಳಕ್ಕೆ ಕಳೆದ ಒಂದು ತಿಂಗಳ ಅವಧಿಯಲ್ಲಿ 8 ಹಂತದಲ್ಲಿ ಚುನಾವಣೆ ನಡೆಸಲಾಗಿತ್ತು. ಇಂದು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಟಿಎಂ ಜಯಭೇರಿ ಸಾಧಿಸಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 217 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವು ಮೂಲಕ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಮತ್ತೊಂದೆಡೆ ಬಿಜೆಪಿ ಮೂರಂಕಿ ಗಡಿ ದಾಟದೆ ತೀವ್ರ ಮುಖಭಂಗ ಅನುಭವಿಸಿದೆ. ಈ ಫಲಿತಾಂಶ ಬಿಜೆಪಿ ಪಾಳಯದಲ್ಲಿ ದೊಡ್ಡ ನಿರಾಸೆಯೊಂದನ್ನು ಮೂಡಿಸಿರುವುದು ಸುಳ್ಳಲ್ಲ. ಆದರೆ, ಈ ನಡುವೆ ನಂದಿಗ್ರಾಮ ಕ್ಷೇತ್ರದಲ್ಲಿ ಆರಂಭದಲ್ಲಿ ಮಮತಾ ಬ್ಯಾನರ್ಜಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿತ್ತು. ಆದರೆ, ಇದೀಗ ದಿಢೀರ್ ಬೆಳವಣಿಗೆಯಲ್ಲಿ ಮಮತಾ ಬ್ಯಾನರ್ಜಿ ಸೋಲನುಭವಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿರುವುದು ಟಿಎಂಸಿ ಪಾಳಯದಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಈ ಸೋಲನ್ನು ಒಪ್ಪದ ಮಮತಾ ಬ್ಯಾನರ್ಜಿ ಕೋರ್ಟ್​ ಮೊರೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Exit mobile version