ಮರಾಠಾ ಅಭಿವೃದ್ಧಿ ಪ್ರಾಧಿಕಾರ ಅಲ್ಲ ನಿಗಮ

ಬೆಂಗಳೂರು, ಡಿ. 03: ಚಳಿಗಾಲದ ಅಧಿವೇಶನ ಹತ್ತಿರವಾಗುತ್ತಿದ್ದಂತೆ ಹಾಗೂ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳು ಸಜ್ಜುಗೊಳ್ಳುತ್ತಿದ್ದಂತೆ ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ನಿಗಮ ಎಂದು ಇದೀಗ ತಿದ್ದುಪಡಿ ಮಾಡಿದೆ.

ಮಾರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ ರಾಜ್ಯ ಸರ್ಕಾರ 2020ರ ನವೆಂಬರ್‌ 27 ರಂದು ಹೊರಡಿಸಿದ ಆದೇಶಕ್ಕೆ ಡಿಸೆಂಬರ್‌ 1ರಂದು ತಿದ್ದುಪಡಿ ಆದೇಶ ಹೊರಡಿಸಿದೆ. ಬೆಳಗಾವಿ, ಬಸವ ಕಲ್ಯಾಣ ಮತ್ತು ಮಸ್ಕಿ ವಿಧಾನ ಸಭಾ ಕ್ಷೇತ್ರ ಉಪಚುನಾವಣೆ ಹೊತ್ತಿನಲ್ಲೇ ಅವವಸರದಿಂದ 50 ಕೋಟಿ ಘೋಷಣೆ ಮಾಡಿತ್ತು. ಇದು ಕನ್ನಡ ಪರ ಸಂಘಟನೆಗಳನ್ನು ಕೆರಳಿಸಿತ್ತು ಅದಲ್ಲದೇ ಲಿಂಗಾಯತ ಸಮುದಾಯದ ಆಕ್ರೋಶಕ್ಕೂ ಕಾರಣವಾಗಿತ್ತು.

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಸಮರ್ಥಿಸಿಕೊಂಡಿದ್ದ ಬಿಜೆಪಿ ಸರ್ಕಾರ, ಪ್ರತಿರೋಧ ಹೆಚ್ಚುತ್ತಿದ್ದಂತೆ ಪ್ರಾಧಿಕಾರದ ಬದಲಿಗೆ ನಿಗಮ ಎಂದು ಬದಲಾಯಿಸಿ ಆಕ್ರೋಶವನ್ನು ತಣ್ಣಗಾಗಿಸಲು ಯತ್ನಿಸಿದೆ. ಕರ್ನಾಟಕ ಆರ್ಯವೈಶ್ಯ, ಅಲೆಮಾರಿ, ಉಪ್ಪಾರ, ನಿಜಶರಣರ ಅಂಬಿಗರ ಚೌಡಯ್ಯ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿಗೆ ನಿಗಮ ಸ್ಥಾಪಿಸಿರುವುದನ್ನು ಸ್ಮರಿಸಬಹುದು.

ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರ ನಡುವೆ ಅನೇಕ ವರ್ಷಗಳಿಂದಲೂ ಸಂಘರ್ಷಗಳು ಸರ್ವೇಸಾಮಾನ್ಯವಾಗಿ ಹೋಗಿದೆ. ಹೀಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಸಲ್ಲದು ಎಂಬುದು ಕನ್ನಡ ಸಂಘಟನೆಗಳು ಕೋರ್ಟ್‌ನ ಮುಂದೊಡ್ಡಿದ ವಾದವನ್ನು ಆಲಿಇದ್ದ ಬಿಜೆಪಿ ಸರ್ಕಾರ, ಇದು ಮರಾಠಾ ಭಾಷೆಯ ಪ್ರಾಧಿಕಾರವಲ್ಲ, ಬದಲಿಗೆ ಮರಾಠಿಗರು ಹಿಂದುಳಿದಿದ್ದಾರೆ. ಅವರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿತ್ತು. ಸರ್ಕಾರದ ಈ ಸಮರ್ಥನೆಯನ್ನು ಒಪ್ಪದ ಕನ್ನಡ ಪರ ಸಂಘಟನೆಗಳು ಡಿಸೆಂಬರ್‌ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.  

Exit mobile version