Hubballi: ಹಲವಾರು ಅಭಿಮಾನಿಗಳ ಬಳಗವನ್ನು ಹೊಂದಿದ್ದ ಸ್ಯಾಂಡಲ್ ವುಡ್ ಸುಲ್ತಾನ್ ದರ್ಶನ್ #SandalwoodStarDarshan ಈಗ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿದ್ದಾರೆ . ನಟನೆಂದರೆ ಹಲವರಿಗೆ ಮಾದರಿಯಾಗಿರಬೇಕು.ಅದರ ಹೊರತಾಗಿ ರಿಯಲ್ ಅಲ್ಲಿ ರೌಡಿ. ತೆರೆಯಮೇಲೆ ಹೀರೋ ಆಗಿ ಇರುವುದಲ್ಲ. ಹಾಗಾಗಿ ಇನ್ಮುಂದೆ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಯುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M B Patil) ಹೇಳಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_510,h_340/https://vijayatimes.com/wp-content/uploads/2024/06/Deaprtment-of-Agriculture-1.jpg)
ಈ ಕುರಿತಾಗಿ ಹುಬ್ಬಳ್ಳಿ (Hubballi)ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ. ಬಿ ಪಾಟೀಲ್ ನಮ್ಮ ಸರ್ಕಾರ ಎಂದಿಗೂ ಅಪರಾಧಿಗಳಿಗೆ ಮಣೆ ಹಾಕುವುದಿಲ್ಲ. ಹಾಗಾಗಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪ ಸಾಬೀತಾದರೆ ಅವರಿಗೆ ಕೂಡ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ.
ಕೊಲೆಯಂತಹ ಗಂಭೀರ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ (Department of Agriculture) ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ. ಆದಷ್ಟು ಬೇಗ ಕೃಷಿ ರಾಯಭಾರಿಯನ್ನು ಬದಲಿಸುತ್ತೇವೆ ಎಂದಿದ್ದಾರೆ.
![](https://sp-ao.shortpixel.ai/client/to_webp,q_glossy,ret_img,w_800,h_450/https://vijayatimes.com/wp-content/uploads/2024/06/darshan10.webp)
ಇನ್ನು ಮಾಜಿ ಸಿಎಂ ಯಡಿಯೂರಪ್ಪ (Yadiyurappa) ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿದ ಅವರು ಇದರಲ್ಲಿ ಯಾವುದೇ ರಾಜಕೀಯ ದ್ವೇಷವಿಲ್ಲ. ಈ ಹಿಂದೆ ಪೋಕ್ಸೋ ವಿಚಾರವಾಗಿ, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ಪ್ರಕರಣವನ್ನು ನೋಡಿದ್ದೀರಿ. ಪೋಕ್ಸೋ ಕಾಯ್ದೆ ಅಡಿ ತನ್ನದೇ ಆದ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಉಳಿದ ಪ್ರಕರಣ ಗಳಂತಲ್ಲ ಪೋಕ್ಸೋ ಕಾಯ್ದೆ ಅತ್ಯಂತ ಗಂಭೀರವಾದದ್ದು.
ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಈ ಕಾಯ್ದೆ ಅಡಿ ಪ್ರಕರಣ ದಾಖಲಿಸಲೇಬೇಕಾಗುತ್ತದೆ.ಇದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ (Congress And BJP) ಪಕ್ಷದ ಪ್ರಶ್ನೆ ಬರಲ್ಲ. ಅಲ್ಲದೆ ಇದರಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಹಾಗಾಗಿ ಇದು ರಾಜಕೀಯ ಪಕ್ಷಗಳ ಕುತಂತ್ರವಲ್ಲ ಎಂದಿದ್ದಾರೆ.