Bangalore : ರಾಜ್ಯ ಸರ್ಕಾರ (State Govt) ಹಾಲು ಉತ್ಪಾದಕರಿಗೆ ಪಾವತಿ ಮಾಡಬೇಕಿದ್ದ ಪ್ರೋತ್ಸಾಹ ಧನವನ್ನು ಇನ್ನೂ ಬಿಡುಗಡೆ ಮಾಡಿಲ್ಲ (Not released) . ಹೀಗಾಗಿ ರಾಜ್ಯದ ಹಾಲು ಉತ್ಪಾದಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ (Financial trouble) . ಮೂಲಗಳ ಪ್ರಕಾರ 622 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ (State Govt) ಪಾವತಿ ಮಾಡಬೇಕಿದೆ.

ರಾಜ್ಯದ ಹಾಲು ಉತ್ಪಾದಕರಿಗೆ ಸರ್ಕಾರ 5 ರೂ.ಗಳ (Govt 5 Rs) ಪ್ರೋತ್ಸಾಹ ಧನವನ್ನು ನೀಡುತ್ತದೆ. ಸದ್ಯ ಸಾಮಾನ್ಯ ವರ್ಗದ (Presently of general category) ಹಾಲು ಉತ್ಪಾದಕರಿಗೆ ಸುಮಾರು 606.69 ಕೋಟಿ ರೂ.ಗಳು (606.69 crores of Rs) , ಪರಿಶಿಷ್ಟ ಜಾತಿ ವರ್ಗದವರಿಗೆ 6.85 ಕೋಟಿ ರೂ.ಗಳು (6.85 crores) ಹಾಗೂ ಪರಿಶಿಷ್ಟ ವರ್ಗದವರಿಗೆ 9ಕೋಟಿ ರೂ.ಗಳ (9 crores of Rs) ಪ್ರೋತ್ಸಾಹ ಧನವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಮೂರ್ನಾಲ್ಕು (Three to four years) ತಿಂಗಳಿಗೊಮ್ಮೆ ಪ್ರೋತ್ಸಾಹ ಧನ ಬಿಡುಗಡೆಯಾಗುತ್ತಿದೆ. ಇದರಿಂದ ನಮಗೆ ತೀವ್ರ ತೊಂದರೆಯುಂಟಾಗುತ್ತಿದೆ (We are in serious trouble) ಎಂದು ಹಾಲು ಉತ್ಪಾದಕರು ತಮ್ಮ ಅಳಲು ತೊಡಿಕೊಂಡಿದ್ದಾರೆ.
ಇನ್ನು ರಾಜ್ಯ ಸರ್ಕಾರದ (State Govt) ಈ ಕ್ರಮವನ್ನು ಟೀಕಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 8.89 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ (Credit to farmers) 622.54 ಕೋಟಿ ರೂಪಾಯಿ ಪ್ರೋತ್ಸಾಹ ಧಾನವನ್ನ ಕಳೆದ 6 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ. ಸಿಎಂ ಸಿದ್ದರಾಮಯ್ಯನವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ (politics) ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ? ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ (Crores of rupees) ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ (International cricket) ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಹೇಳಿದ್ದಾರೆ.