ಬೆಂಗಳೂರು, ಮಾ. 19: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರ ಗನ್ ಮ್ಯಾನ್ ಹಾಗೂ ಕಾರು ಚಾಲಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಸುಧಾಕರ್ ಮನೆಯ ಖಾಸಗಿ ಚಾಲಕ ಸೋಮಶೇಖರ್ ಮತ್ತು ಗನ್ ಮ್ಯಾನ್ ತಿಮ್ಮಯ್ಯ ಅವರು ಬೀದಿಯಲ್ಲಿ ಜಗಳವಾಡಿದ್ದಾರೆ. ಈ ಸಂಬಂಧದ ವಿಡಿಯೊ ವೈರಲ್ ಆಗಿದೆ. ಜಗಳವಾಡುತ್ತಿದ್ದ ಅವರನ್ನು ಬಿಡಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.
ಗುರುವಾರ ಸಚಿವ ಸುಧಾಕರ್ ಅವರು ಮನೆ ಬಳಿ ಅಂಗವಿಕಲರೊಬ್ಬರು ಟೀ ಮಾರಾಟ ಮಾಡಲು ಬಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಗನ್ಮ್ಯಾನ್ ತಿಮ್ಮಯ್ಯ, ಟೀ ಮಾರುವ ವಿಶೇಷಚೇತನ ವ್ಯಕ್ತಿಗೆ ಹೊಡೆದಿದ್ದಾರೆ. ಘಟನೆ ನೋಡಿದ್ದ ಖಾಸಗಿ ವಾಹನ ಚಾಲಕ ಸೋಮಶೇಖರ್ ಸಚಿವರಿಗೆ ದೂರು ಕೊಟ್ಟಿರಬಹುದಾ ಎಂಬ ಅನುಮಾನದಿಂದ ಸೋಮಶೇಖರ್ ಮೇಲೆ ತಿಮ್ಮಯ್ಯ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ಘಟನೆ ಸಚಿವ ಸುಧಾಕರ್ ಮನೆ ಮುಂದಿನ ರಸ್ತೆಯಲ್ಲೇ ನಡೆದಿದೆ