ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು, ಫೆ. 25: ಬಿಜೆಪಿಯ ಎಂಟಿಬಿ ನಾಗರಾಜ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಗೆಲುವನ್ನು ಸಾಧಿಸಿದ್ದಂತ ಶಾಸಕ ಶರತ್ ಬಚ್ಚೇಗೌಡ ಅವರು, ಇಂದು ಅಧಿಕೃತವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ಇಂದು ಸರಳವಾಗಿ ನಡೆದಂತ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹೊಸಕೋಟೆ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು, ಕಾಂಗ್ರೆಸ್ ಸದಸ್ಯತ್ವ ಪತ್ರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಂದ ಸದಸ್ಯತ್ವ ಪತ್ರವನ್ನು ಪಡೆಯುವ ಮೂಲಕ, ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದಂತ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹೊಸಕೋಟೆಯಲ್ಲಿ ಹಿಂಬಾಗಿಲಿನಿಂದ ಬಂದಂತ ಎಂಟಿಬಿ ನಾಗರಾಜ್ ಅವರಿಗೆ ಜನರು ವೋಟ್ ಹಾಕಿಲ್ಲ. ಹೊಸಕೋಟೆ ಜನರು ಶರತ್ ಗೆ ವೋಟ್ ಹಾಕಿರೋದು ಎಂಬುದಾಗಿ ಹೇಳುವ ಮೂಲಕ, ಎಂಟಿಬಿ ನಾಗರಾಜ್ ವಿರುದ್ಧ ವಾಗ್ದಾಳಿ ನಡೆಸಿದರು.

Exit mobile version