• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೂರು ದಿನಗಳ ಕಾಲ ನಡೆಯುವ ಆಟಿಕೆ ಮೇಳಕ್ಕೆ ಮೋದಿ ಚಾಲನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಮೂರು ದಿನಗಳ ಕಾಲ ನಡೆಯುವ ಆಟಿಕೆ ಮೇಳಕ್ಕೆ ಮೋದಿ ಚಾಲನೆ
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 27: ಮಾರ್ಚ್ 2ರವರೆಗೆ ಮೂರು ದಿನಗಳ ಕಾಲ ನಡೆಯುವ ಭಾರತ ಆಟಿಕೆ ಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಶನಿವಾರ ಉದ್ಘಾಟಿಸಿದರು.

ಭಾರತದಲ್ಲಿ ಆಟಿಕೆ ಉದ್ಯಮಕ್ಕೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಈ ಮಹಾಮೇಳದಲ್ಲಿ ಆಟಿಕೆ ತಯಾರಕರು, ಗೊಂಬೆ ಖರೀದಿದಾರರು, ವಿದ್ಯಾರ್ಥಿಗಳು, ಶಿಕ್ಷಕರು, ಆಟಿಕೆ ವಿನ್ಯಾಸಕರು ಮೊದಲಾದವರು ಪಾಲ್ಗೊಳ್ಳುತ್ತಿದ್ದಾರೆ. ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಂದು ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ತಮ್ಮ ಆಟಿಕೆಗಳನ್ನ ಆನ್​ಲೈನ್ ಮೂಲಕ ಪ್ರದರ್ಶನ ಮಾಡಲಿದ್ಧಾರೆ. ಭಾರತದ ಸಾಂಪ್ರದಾಯಿಕ ಆಟಿಕೆಗಳ ಜೊತೆಗೆ ಎಲೆಕ್ಟ್ರಾನಿಕ್ ಟಾಯ್, ಗೇಮ್, ಪಜಲ್ ಮೊದಲಾದ ಆಧುನಿಕ ಆಟಿಕೆ ಸಾಮಗ್ರಿಗಳು ಪ್ರದರ್ಶನದಲ್ಲಿರಲಿವೆ. ಸಾರ್ವಜನಿಕರು ಈ ಆಟಿಕೆಗಳನ್ನ ವೀಕ್ಷಿಸುವುದರ ಜೊತೆಗೆ ಆನ್​ಲೈನ್​ನಲ್ಲೇ ಖರೀದಿ ಮಾಡುವ ಅವಕಾಶ ಇದೆ.

ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕವೇ ಟಾಯ್ ಫೇರ್ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ, ಆಟಿಕೆಗಳಿಂದ ಮಕ್ಕಳ ಮನಸು ವಿಕಸನಗೊಳ್ಳಲು ಹೇಗೆ ಸಹಕಾರಿಯಾಗುತ್ತದೆ ಎಂಬುದನ್ನು ವಿವರಿಸಿದರು. “ಮಕ್ಕಳ ಮನಸಿನ ವಿಕಸನಕ್ಕೆ ಗೊಂಬೆಗಳು ಬಹಳ ಪ್ರಮುಖ ಪಾತ್ರ ವಹಿಸುತ್ತವೆ. ಮಕ್ಕಳ ಬೌದ್ಧಿಕ ಬೆಳವಣಿಗೆ ಮತ್ತು ಆಶೋತ್ತರ ಭಾವನೆಗಳಿಗೆ ಆಟಿಕೆಗಳು ಪುಷ್ಟಿ ನೀಡುತ್ತವೆ” ಎಂದು ಹೇಳಿದರು.

ಕೇಂದ್ರ ಸರ್ಕಾರವು ದೇಶದಲ್ಲಿ ಗೊಂಬೆ ಉದ್ಯಮಕ್ಕೆ ಪುಷ್ಟಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ವಿಶ್ವದ ಆಟಿಕೆ ಉದ್ಯಮಕ್ಕೆ ಭಾರತ ತಯಾರಕಾ ದೇಶವಾಗಿ ರೂಪಿಸಲು ಪ್ರಯತ್ನವಾಗುತ್ತಿದೆ. ಆ ನಿಟ್ಟಿನಲ್ಲಿ ದೇಶದ ವಿವಿಧೆಡೆ ಟಾಯ್ ಕ್ಲಸ್ಟರ್​ಗಳ ನಿರ್ಮಾಣವಾಗುತ್ತಿದೆ. ಕರ್ನಾಟಕದ ಕೊಪ್ಪಳದಲ್ಲಿ ಈಗಾಗಲೇ ಇಂಥದ್ದೊಂದು ದೊಡ್ಡ ಟಾಯ್ ಕ್ಲಸ್ಟರ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಲ್ಲಿ ದೇಶದ ಮೊದಲ ಟಾಯ್ ಕ್ಲಸ್ಟರ್ ತಲೆ ಎತ್ತಲಿದೆ. ಬೊಂಬೆ ನಗರಿ ಚನ್ನಪಟ್ಟಣದಲ್ಲಿ ದೇಶದ ಅತಿದೊಡ್ಡ ಟಾಯ್ ಕ್ಲಸ್ಟರ್ ನಿರ್ಮಾಣವಾಗಲಿದೆ. ಇಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಬೊಂಬೆ ತಯಾರಕರ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದರು. ಚನ್ನಪಟ್ಟಣದ ಬೆಂಬೆ ತಯಾರಕರ ಜೊತೆಯೂ ಅವರು ಮಾತನಾಡಿದರು.

ಜಾಗತಿಕವಾಗಿ ಅಟಿಕೆ ಉದ್ಯಮ ಸುಮಾರು 6.5 ಲಕ್ಷ ಕೋಟಿ ರೂನಷ್ಟಿದೆ. ಭಾರತದಲ್ಲೇ 12 ಸಾವಿರ ಕೋಟಿ ರೂ ಆಟಿಕೆ ಉದ್ಯಮ ಇದೆ. ಈ ಟಾಯ್ ಕ್ಷೇತ್ರದಲ್ಲಿ ಚೀನಾದ್ದೇ ಸಿಂಹಪಾಲು ಇದ್ದು, ಭಾರತ ಡ್ರಾಗನ್ ರಾಷ್ಟ್ರದ ಪ್ರಾಬಲ್ಯ ಕಡಿಮೆ ಮಾಡಿ ಉತ್ತುಂಗಕ್ಕೆ ಏರಲು ಬೇಕಾದ ಸೌಕರ್ಯಗಳನ್ನ ತಯಾರಿಸುತ್ತಿದೆ. ಏಕಸ್​ನಂಥ ಬೆಂಬೆ ತಯಾರಕ ಸಂಸ್ಥೆಗಳು ಭಾರತದಲ್ಲಿ ಘಟಕಗಳನ್ನ ಸ್ಥಾಪಿಸಿ ಅನೇಕ ರಾಷ್ಟ್ರಗಳಿಗೆ ಆಟಿಕೆ ರಫ್ತು ಮಾಡುವ ಯೋಜನೆ ಹೊಂದಿವೆ.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.