ಬಿಜೆಪಿ ಕಾರ್ಯಕರ್ತರಿಗೆ 370 ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

Bengaluru: ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ (Loksabha Election) ನಡೆಯಲಿದ್ದು ಪ್ರತಿ ಬೂತ್‌ನಲ್ಲಿ 370ಕ್ಕೂ ಹೆಚ್ಚು ಮತ ಪಡೆಯುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಮತದಾರರ ಹೃದಯ ಗೆಲ್ಲುವುದು, ಕುಟುಂಬದ ಜನರ ಮನ ಗೆಲ್ಲುವುದು, ಬೂತ್‌‍ನ ಎಲ್ಲರ ಮನ ಗೆದ್ದು ಬಿಜೆಪಿಗೆ ಮತ ನೀಡುವಂತೆ ಮಾಡುವ ಸವಾಲನ್ನು ಬಿಜೆಪಿಯ ಕಾರ್ಯಕರ್ತರು ನಿರ್ವಹಿಸಬೇಕಿದೆ.

ಕೇಂದ್ರದ ಬಿಜೆಪಿ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಜೊತೆಗೆ ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡುವಂತೆ ಕೇಳಿಕೊಳ್ಳಬೇಕು ಎಂದಿದ್ದಾರೆ. ಇನ್ನು ಕರ್ನಾಟಕದ ಪ್ರತಿ ಮನೆ ಮನೆಗೂ ಬಿಜೆಪಿ (BJP) ಸರ್ಕಾರದ ಸಾಧನೆಗಳನ್ನು ಹಾಗೂ ಗ್ಯಾರಂಟಿ ಯೋಜನೆಗಳ (Guarantee Scheme) ವಿಚಾರದಲ್ಲಿ ಕಾಂಗ್ರೇಸ್ ಸರ್ಕಾರದ ವೈಫಲ್ಯಗಳು, ಹಾಗೂ ಇತರೇ ಭ್ರಷ್ಟಾಚಾರದ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ.

ಕಾಂಗ್ರೆಸ್‌ ಸರಕಾರವು ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ನೀಡುತ್ತಿಲ್ಲ ಎಂಬುದನ್ನು ಮನವರಿಕೆ ಮಾಡಬೇಕು. ಮೋದಿ ಗ್ಯಾರಂಟಿ ನುಡಿದಂತೆ ನಡೆಯುವ ಗ್ಯಾರಂಟಿ ಎಂದು ತಿಳಿಹೇಳಬೇಕು.ಎಂದು ‘ನಮೋ ಆ್ಯಪ್‌’ (Namo App) ಮೂಲಕ ಸಂವಾದ ನಡೆಸಿ ಕರ್ನಾಟಕದ ಬೂತ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಸಲ ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ (BJP-JDS Alliance) ಇದ್ದು, ಪ್ರತಿ ಬೂತ್‌‍ನಲ್ಲೂಎರಡೂ ಪಕ್ಷಗಳ ಸಮನ್ವಯ ಸಭೆ ನಡೆಸಬೇಕು. ಅದು ಖಂಡಿತವಾಗಿ ನಮ್ಮನ್ನು ಗೆಲುವಿನೆಡೆ ಕರೆದೊಯ್ಯಲಿದೆ.

ನಾವು ಆಡಳಿತದಲ್ಲಿ ಇಲ್ಲದಿದ್ದರೂ ಭೇದಭಾವ ಮಾಡಿಲ್ಲ. ಈ ಬಗ್ಗೆ ಜನರಿಗೆ ಅರ್ಥವಾಗುವ ರೀತಿಯಲ್ಲಿ ತಿಳಿಸಬೇಕು. ಮಹಿಳಾ ಶಕ್ತಿ ಹೆಚ್ಚು ಪ್ರಮಾಣದಲ್ಲಿ ಮತದಾನ ಮಾಡುವಂತೆ ನೋಡಿಕೊಳ್ಳಬೇಕು.ಹಬ್ಬದ ಸಂದರ್ಭವಾಗಿರುವುದರಿಂದ ಕೈ ಮೇಲೆ ಕಮಲದ ಚಿತ್ರ ಬಿಡಿಸಿಕೊಳ್ಳಬೇಕು. ಮತದಾನ ಮಾಡುವುದು ಹೇಗೆ ಎಂದು ಜಾಗೃತಿ ಮೂಡಿಸಬೇಕು ಎಂದು ಸಮನ್ವಯದ ಪಾಠ ಹೇಳಿಕೊಟ್ಟಿದ್ದಾರೆ.

Exit mobile version