9.5 ಕೋಟಿ ರೈತರ ಬ್ಯಾಂಕ್ ಖಾತೆಗೆ ₹19,000 ಕೋಟಿ ಬಿಡುಗಡೆ ಮಾಡಿದ ಮೋದಿ ಸರ್ಕಾರ

ನವದೆಹಲಿ, ಮೇ. 14: ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ–ಕಿಸಾನ್‌) ಯೋಜನೆಯಡಿ 8ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆದ ಕಾರ್ಯಕ್ರಮದಲ್ಲಿ 9.5 ಕೋಟಿಗೂ ಅಧಿಕ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ₹19,000 ಕೋಟಿಗೂ ಅಧಿಕ ಮೊತ್ತವನ್ನು ಪ್ರಧಾನಿ ಮೋದಿ ವರ್ಗಾಯಿಸಿದರು. ಇದೇ ಕಾರ್ಯಕ್ರಮದಲ್ಲಿ ಮೋದಿಯವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್ ಸಹ ಉಪಸ್ಥಿತರಿರಲಿದ್ದಾರೆ.

ಜನರು ಮಾಸ್ಕ್ ಅನ್ನು ಸರಿಯಾಗಿ ಧರಿಸಿ. ವೈದ್ಯಕೀಯ ವಿಧಾನವನ್ನು ವಿಳಂಬ ಮಾಡಬೇಡಿ, ನಿಮಗೆ ಸಣ್ಣ ರೋಗಲಕ್ಷಣ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ. ನಾವು #LargestVaccinationDrive ಗೆ ಚಾಲನೆ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಕೊವಿಡ್ ಲಸಿಕೆಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು. ಎಲ್ಲಾ ಸಮಯದಲ್ಲೂ ಸೂಕ್ತವಾದ ಮಾರ್ಗಸೂಚಿಗಳನ್ನು ಪಾಲಿಸಿ ಎಂದು ಪ್ರಧಾನಿ ಹೇಳಿದರು.

Exit mobile version