ರಾಜ್ಯಗಳ ನಡುವಿನ ಸಮನ್ವಯ, ವೇಗದ (Modi’s message on Mekedatu debate) ಆಡಳಿತ ಮತ್ತು ದೀರ್ಘಕಾಲಿಕ ಜಲ ಭದ್ರತೆಗೆ ಒತ್ತು ನೀಡಿದ ಪ್ರಧಾನಿ
ಮೂಲಸೌಕರ್ಯ ಯೋಜನೆಗಳ ಪ್ರಗತಿ ಪರಿಶೀಲನೆ
ಕೆನ್-ಬೆಟ್ವಾ ಯೋಜನೆಯನ್ನು ಮಾದರಿಯನ್ನಾಗಿ ಬಳಸುವಂತೆ ಸಲಹೆ
New Delhi : ರಾಜ್ಯಗಳ ನಡುವೆ ಉಂಟಾಗುವ ಜಲ ವಿವಾದಗಳನ್ನು (Modi’s message on Mekedatu debate) ಪರಸ್ಪರ ಸಹಕಾರ, ಸಮನ್ವಯ ಮತ್ತು ತ್ವರಿತ ಆಡಳಿತಾತ್ಮಕ ಕ್ರಮಗಳ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ವಿಜಯ್ (Chief Minister Vijay) ಅವರು ಮೇಕೆದಾಟು ಯೋಜನೆ ಕುರಿತು ತಮ್ಮ ನಿಲುವನ್ನು ವ್ಯಕ್ತಪಡಿಸಿದ ಬೆನ್ನಲ್ಲೇ ಪ್ರಧಾನಿ ನೀಡಿರುವ ಈ ಸಂದೇಶ ಮಹತ್ವ ಪಡೆದುಕೊಂಡಿದೆ.
ಬುಧವಾರ ನಡೆದ 51ನೇ ಪ್ರಗತಿ (PRAGATI) ಸಭೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಜಾರಿಯಲ್ಲಿರುವ ಪ್ರಮುಖ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು
ಪರಿಶೀಲಿಸಿದ ಪ್ರಧಾನಿ, ಜಲ ಸಂಪನ್ಮೂಲಗಳ ಸಮರ್ಪಕ ಬಳಕೆ ಹಾಗೂ ರಾಜ್ಯಗಳ ನಡುವಿನ ಉತ್ತಮ ಸಹಕಾರದ ಅಗತ್ಯವನ್ನು ಒತ್ತಿಹೇಳಿದರು.
ಅಂತರರಾಜ್ಯ ಸಮಸ್ಯೆಗಳನ್ನು ಸಂಘರ್ಷದ ಮೂಲಕವಲ್ಲ, ಪರಸ್ಪರ ಅರ್ಥೈಸಿಕೆ ಮತ್ತು ಅಭಿವೃದ್ಧಿಯ ದೃಷ್ಟಿಕೋನದಿಂದ ಬಗೆಹರಿಸಿಕೊಳ್ಳುವುದು ದೇಶದ ಹಿತದೃಷ್ಟಿಯಿಂದ ಅತ್ಯಗತ್ಯ ಎಂದು ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ರೈಲ್ವೆ, ರಸ್ತೆ, ವಿದ್ಯುತ್ ಮತ್ತು ಇತರೆ ಮೂಲಸೌಕರ್ಯ ಕ್ಷೇತ್ರಗಳಿಗೆ ಸಂಬಂಧಿಸಿದ (Modi’s message on Mekedatu debate) ಸುಮಾರು 30 ಸಾವಿರ ಕೋಟಿ ರೂಪಾಯಿ ಮೌಲ್ಯದ ಏಳು ಪ್ರಮುಖ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಸಾರ್ವಜನಿಕ ಕಾಮಗಾರಿಗಳ ಅನುಷ್ಠಾನದಲ್ಲಿ ಉಂಟಾಗುವ ವಿಳಂಬವು ಯೋಜನೆಗಳ ವೆಚ್ಚವನ್ನು
ಗಣನೀಯವಾಗಿ ಹೆಚ್ಚಿಸುವುದರ ಜೊತೆಗೆ ಜನರಿಗೆ ತಲುಪಬೇಕಾದ ಸೇವೆಗಳನ್ನೂ ತಡಗೊಳಿಸುತ್ತದೆ ಎಂದು ಹೇಳಿದರು.
ಯೋಜನೆಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಇಲಾಖೆಗಳ ನಡುವೆ ಸಮನ್ವಯ, ನಿರಂತರ ನಿಗಾವಳಿ ಹಾಗೂ ಆಡಳಿತಾತ್ಮಕ ಚುರುಕುತನ ಅಗತ್ಯ ಎಂದು ಅವರು ಸೂಚಿಸಿದರು.
ಯೋಜನೆಗಳ ಅನುಷ್ಠಾನದಲ್ಲಿ ಎದುರಾಗುವ ತಾಂತ್ರಿಕ ಮತ್ತು ಆಡಳಿತಾತ್ಮಕ ಅಡೆತಡೆಗಳನ್ನು ತ್ವರಿತವಾಗಿ ನಿವಾರಿಸಿದರೆ ಮಾತ್ರ ಸಾರ್ವಜನಿಕರಿಗೆ ಅದರ ನೇರ ಪ್ರಯೋಜನ ತಲುಪಲಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು.
ಜಲ ಸಂಪನ್ಮೂಲ ನಿರ್ವಹಣೆಯ ಕುರಿತು ವಿಶೇಷವಾಗಿ ಮಾತನಾಡಿದ ಪ್ರಧಾನಿ ಮೋದಿ, ಕೆನ್-ಬೆಟ್ವಾ(Ken-betwa) ನದಿ ಜೋಡಣೆ ಯೋಜನೆಯನ್ನು ಇತರೆ ರಾಜ್ಯಗಳು ಮಾದರಿಯಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ನದಿ ಜೋಡಣೆ, ಜಲ ಸಂರಕ್ಷಣೆ, ಭೂಗರ್ಭ ಜಲ ಮರುಭರ್ತಿ ಹಾಗೂ ಪರಿಣಾಮಕಾರಿ ನೀರಾವರಿ ವ್ಯವಸ್ಥೆಗಳಂತಹ ಯೋಜನೆಗಳನ್ನು ರಾಜ್ಯಗಳು ಗುರುತಿಸಿ ಜಾರಿಗೆ ತರಬೇಕೆಂದು ಅವರು ಹೇಳಿದರು.
ದೇಶದ ಭವಿಷ್ಯದ ಜಲ ಭದ್ರತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಸಮಗ್ರ ಯೋಜನೆಗಳನ್ನು ರೂಪಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ರಾಜ್ಯಗಳು ಪರಸ್ಪರ ಸಹಕಾರದ ಮನೋಭಾವದಿಂದ ಕಾರ್ಯನಿರ್ವಹಿಸಬೇಕೆಂದು ಪ್ರಧಾನಿ ಕರೆ ನೀಡಿದರು.
ಜಲ ಸಂಪನ್ಮೂಲಗಳ ಸಮರ್ಪಕ ನಿರ್ವಹಣೆ ಕೃಷಿ, ಕೈಗಾರಿಕೆ ಮತ್ತು ಕುಡಿಯುವ ನೀರಿನ ಭದ್ರತೆಗೆ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.
PRAGATI ವೇದಿಕೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯವನ್ನು ಬಲಪಡಿಸುವ ಮಹತ್ವದ ವ್ಯವಸ್ಥೆಯಾಗಿದೆ ಎಂದು ಪ್ರಧಾನಿ ಹೇಳಿದರು.
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ (ICT) ಆಧಾರಿತ ಈ ವೇದಿಕೆ ಆಡಳಿತ ದಕ್ಷತೆ ಹೆಚ್ಚಿಸುವುದರ ಜೊತೆಗೆ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಇದೇ ವೇಳೆ ಸ್ವಚ್ಛ ಭಾರತ್ ಮಿಷನ್-ಅರ್ಬನ್ 2.0 (Swachh Bharat Mission-Urban 2.0) ಯೋಜನೆಯ ಪ್ರಗತಿಯನ್ನೂ ಪರಿಶೀಲಿಸಿದ ಪ್ರಧಾನಿ, ನಗರ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ
ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಕೇವಲ ಮೂಲಸೌಕರ್ಯ ನಿರ್ಮಾಣಕ್ಕೆ ಸೀಮಿತವಾಗದೆ,
ಸಾರ್ವಜನಿಕರ ಭಾಗವಹಿಸುವಿಕೆ, ನಿರಂತರ ನಿಗಾವಳಿ ಮತ್ತು ವಿವಿಧ ಇಲಾಖೆಗಳ ಸಮನ್ವಯದ ಮೂಲಕ ಸ್ಪಷ್ಟ ಫಲಿತಾಂಶಗಳನ್ನು ಸಾಧಿಸುವತ್ತ ಗಮನಹರಿಸಬೇಕು ಎಂದು ಅವರು ಹೇಳಿದರು.
ತ್ಯಾಜ್ಯ ಸಂಸ್ಕರಣಾ ಘಟಕಗಳು ಮತ್ತು ಇತರ ಯೋಜನೆಗಳ ನಿರ್ಮಾಣವನ್ನು ವೇಗಗೊಳಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದರು.
ವಿದ್ಯುತ್ ಹಾಗೂ ಸಾರಿಗೆ ಕ್ಷೇತ್ರಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ನಗರ ಪ್ರದೇಶಗಳು, ವಸತಿ ಕಾಲೊನಿಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಮೇಲ್ಚಾವಣಿ ಸೌರ ಘಟಕಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಜೊತೆಗೆ ಕಾಲುವೆಗಳ ಮೇಲ್ಭಾಗದಲ್ಲಿ ಸೌರ ಫಲಕಗಳನ್ನು ಅಳವಡಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಸೂಚಿಸಿದರು.
ಇದರಿಂದ ನೀರಿನ ಆವಿಯಾಗುವಿಕೆ ಕಡಿಮೆಯಾಗುವುದರ ಜೊತೆಗೆ ನವೀಕರಿಸಬಹುದಾದ ಇಂಧನ ಉತ್ಪಾದನೆಗೂ ಉತ್ತೇಜನ ಸಿಗಲಿದೆ ಎಂದು ಅವರು ಹೇಳಿದರು.
ರಸ್ತೆ ಮತ್ತು ಬಂದರು ಅಭಿವೃದ್ಧಿ ಯೋಜನೆಗಳ ಚರ್ಚೆಯ ವೇಳೆ ವಾಧವನ್ ಬಂದರನ್ನು(Wadhawan Port) ಸಮಗ್ರ ಸಾರಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಅಗತ್ಯವನ್ನೂ ಅವರು ಪ್ರಸ್ತಾಪಿಸಿದರು.
ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಸಮಯಬದ್ಧ ಕಾರ್ಯಯೋಜನೆಗಳ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ
ವೇಗ ನೀಡುವಂತೆ ಕೇಂದ್ರ ಸಚಿವಾಲಯಗಳು, ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನಿರ್ದೇಶನ ನೀಡಿದರು.
ದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರವೇ ಪ್ರಮುಖ ಶಕ್ತಿಯಾಗಿದ್ದು, ಅದನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ :https://vijayatimes.com/siddaramaiah-resigns-as-chief-minister/
