• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೋದಿಯದು ದೇಶವನ್ನೇ ಮಾರುವ ಕೆಲಸ: ಎಂ. ಲಕ್ಷ್ಮಣ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮೋದಿಯದು ದೇಶವನ್ನೇ ಮಾರುವ ಕೆಲಸ: ಎಂ. ಲಕ್ಷ್ಮಣ್
0
SHARES
0
VIEWS
Share on FacebookShare on Twitter

ಮೈಸೂರು, ಡಿ. 17: ” ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಮೇಲೆ ಇಡೀ ದೇಶವನ್ನೇ ಮಾರುವ ಕೆಲಸವಾಗುತ್ತಿದೆ. 34 ಪ್ರಮುಖ ಸಾರ್ವಜನಿಕ ವಲಯಗಳನ್ನು ಇಲ್ಲಿಯವರೆಗೆ ಖಾಸಗೀಕರಣ ಮಾಡಲಾಗಿದೆ” ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಆರೋಪಿಸಿದರು.

ಮೈಸೂರಿನ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈಲ್ವೆ ಖಾಸಗೀಕರಣದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. “ರೈಲ್ವೆ ಇಲಾಖೆಯನ್ನು ಶೇಕಡಾ 60ರಷ್ಟು ಈಗಾಗಲೇ ಖಾಸಗೀಕರಣ ಮಾಡಲಾಗಿದೆ” ಎಂದು ಹೇಳಿದರು.

“ಈಗಾಗಲೇ ದೇಶದಲ್ಲಿ 70 ರೈಲ್ವೆ ನಿಲ್ದಾಣಗಳನ್ನು 3 ವರ್ಷಗಳಿಂದ ಖಾಸಗಿಯವರಿಗೆ ವಹಿಸಲಾಗಿದೆ. 2017ರಲ್ಲಿ ದೇಶಾದ್ಯಂತ 151 ರೈಲುಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹಂತ-ಹಂತವಾಗಿ ಇಡೀ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ರೈಲ್ವೆ ಇಲಾಖೆಯನ್ನು ಅದಾನಿ ಗ್ರೂಪ್‌ಗೆ ವಹಿಸಲು ಕೇಂದ್ರ ಸರ್ಕಾರ ಮುಂದಾಗಿದೆಯಾ? ಎನ್ನುವ ಅನುಮಾನವಿದೆ. ಈಗಾಗಲೇ ರೈಲಿನ ಇಂಜಿನ್‌ಗಳಿಗೆಲ್ಲಾ ಅದಾನಿ ಕಂಪನಿ ಸ್ಟಿಕ್ಕರ್‌ಗಳನ್ನು ಅಂಟಿಸಲಾಗುತ್ತಿದೆ” ಎಂದು ಲಕ್ಷ್ಮಣ್ ತಿಳಿಸಿದರು.

“ಮುಂದೊಂದು ದಿನ ಜನಸಾಮಾನ್ಯರು ರೈಲಿನ ಶೌಚಾಲಯವನ್ನು ಬಳಸಲೂ ಸಹ ಹಣ ನೀಡಬೇಕಾಗುವ ಪರಿಸ್ಥಿತಿ ಬರಲಿದೆ. ರೈಲ್ವೆ ಖಾಸಗೀಕರಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು” ಎಂದು ಸರ್ಕಾರವನ್ನು ಆಗ್ರಹಿಸಿದರು.

ಗೋಮಾಂಸದ ರಫ್ತು: “ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ನಮ್ಮ ದೇಶದ ದನದ ಮಾಂಸದ ರಫ್ತು ಸುಮಾರು ಶೇ.25 ರಷ್ಟು ಹೆಚ್ಚಾಗಿದೆ. ಇಡೀ ಪ್ರಪಂಚದಲ್ಲೇ ಬೀಫ್ ರಫ್ತಿನಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ” ಎಂದು ಲಕ್ಷ್ಮಣ್ ಅವರು ದೂರಿದರು.

“ದೇಶದಿಂದ ದಿನನಿತ್ಯ ಸುಮಾರು 20 ಲಕ್ಷ ಟನ್‌ನಷ್ಟು ದನದ ಮಾಂಸ ರಫ್ತಾಗುತ್ತಿದೆ. ದೇಶದ ಪ್ರಮುಖ ದನದ ಮಾಂಸದ ರಫ್ತು ಕಂಪನಿಗಳ ಮಾಲೀಕರು ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿಯವರಿಗೆ ಗಾಂಧಿ ತತ್ವದಲ್ಲಿ ನಂಬಿಕೆ ಇದ್ದರೆ ಕೂಡಲೇ ಎಲ್ಲಾ ರಫ್ತು ಕಂಪನಿಗಳನ್ನು ಮುಚ್ಚಿಸಲಿ” ಎಂದು ಆಗ್ರಹಿಸಿದರು.

Related News

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023
ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್
ಪ್ರಮುಖ ಸುದ್ದಿ

ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

September 26, 2023
ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.