• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

‘ನನಗೆ ಮಂಡ್ಯ, ಮಗನಿಗೆ ಮದ್ದೂರು ಟಿಕೆಟ್’ ; ಬಿಜೆಪಿ ಸೇರಲು ಸುಮಲತಾ ಲೆಕ್ಕಾಚಾರ!

Mohan Shetty by Mohan Shetty
in ರಾಜಕೀಯ, ರಾಜ್ಯ
MP
0
SHARES
0
VIEWS
Share on FacebookShare on Twitter

ಪಕ್ಷೇತರ ಸಂಸದೆ(MP) ಸುಮಲತಾ ಅಂಬರೀಶ್(Sumalatha Ambareesh) ಅವರು ಮುಂದಿನ ಲೋಕಸಭಾ ಚುನಾವಣೆ(Loksabha Election) ದೃಷ್ಟಿಯಿಂದ ಬಿಜೆಪಿ(BJP) ಸೇರಲು ಸಿದ್ದತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

bjp

2019ರಲ್ಲಿ ಕಾಂಗ್ರೆಸ್-ಜೆಡಿಎಸ್(Congress-JDS) ಮೈತ್ರಿಕೂಟದ ವಿರುದ್ದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ರು. ಆದರೆ ಈ ಬಾರಿ ಯಾವುದೇ ಪಕ್ಷದ ಬೆಂಬಲವಿಲ್ಲದೇ ಪಕ್ಷೇತರಳಾಗಿ ಗೆಲ್ಲುವುದು ಅಷ್ಟು ಸುಲಭವಲ್ಲ ಎಂಬುದನ್ನು ಅರಿತಿರುವ ಸುಮಲತಾ ಅವರು, ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದು ಕೆಲ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

sumalatha

ಇನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದಾಗ ಮಂಡ್ಯ ಜಿಲ್ಲಾ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಸುಮಲತಾ ಅವರನ್ನು ಬೆಂಬಲಿಸಿದ್ದರು. ಆಗ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಲು ತೆರೆಮರೆಯಲ್ಲಿ ಕಾಂಗ್ರೆಸ್ ಕೆಲಸ ಮಾಡಿತ್ತು. ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಸ್ಥಿತಿ ಭಿನ್ನವಾಗಿರಲಿದೆ. ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಹಾಕಲಿದೆ.

ಇದನ್ನೂ ಓದಿ : https://vijayatimes.com/information-on-jelly-fish/

ಜೆಡಿಎಸ್ ಕೂಡಾ ಅಭ್ಯರ್ಥಿ ಹಾಕಲಿದೆ. ಹೀಗಾಗಿ ಪಕ್ಷೇತರ ಅಭ್ಯರ್ಥಿಯಾದ್ರೆ ಗೆಲುವು ಸಾಧ್ಯವಿಲ್ಲ ಎನ್ನುವುದು ಸುಮಲತಾ ಅವರ ಲೆಕ್ಕಾಚಾರ. ಹೀಗಾಗಿ ಮಂಡ್ಯದಲ್ಲಿ ಪ್ರಬಲ ನೆಲೆ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಸೇರಲು ಸುಮಲತಾ ಅಂಬರೀಶ್ ಅವರು ಮುಂದಾಗಿದ್ದರು. ಆದರೆ ಸುಮಲತಾ ಅವರ ಕೆಲ ಷರತ್ತುಗಳಿಗೆ ಕಾಂಗ್ರೆಸ್ ‘ನೋ’ ಎಂದಿದ್ದು, ಹೀಗಾಗಿ ಅನಿವಾರ್ಯವಾಗಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಹಾದಿ ಹಿಡಿದಿದ್ದಾರೆ.

ಸುಮಲತಾ ತಾವು ಕಾಂಗ್ರೆಸ್ ಸೇರಲು ತಮ್ಮ ಮಗನಿಗೆ ಮದ್ದೂರು ಕ್ಷೇತ್ರದ ಟಿಕೆಟ್ ಬಯಸಿದ್ದರು ಎನ್ನಲಾಗಿದೆ. ಆದರೆ ಮಾಜಿ ಸಿಎಂ ಎಸ್. ಎಂ ಕೃಷ್ಣ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೆಂಟರಾದ ನಂತರ ಮದ್ದೂರು ಟಿಕೆಟ್ ಎಸ್.ಎಂ ಕೃಷ್ಣ ಅವರ ಸಹೋದರನ ಪುತ್ರ ಗುರುಚರಣ್‍ಗೆ ಪಕ್ಕಾ ಆಗಿದೆ. ಡಿ.ಕೆ ಶಿವಕುಮಾರ್ ಮದ್ದೂರು ಟಿಕೆಟ್ ನೀಡುವ ಭರವಸೆಯನ್ನು ಗುರುಚರಣ್‍ಗೆ ನೀಡಿದ್ದಾರೆ. ಹೀಗಾಗಿ ಮಗನ ರಾಜಕೀಯ ಭವಿಷ್ಯಕ್ಕಾಗಿ ಸುಮಲತಾ ಅವರು ಕಾಂಗ್ರೆಸ್‍ನಿಂದ ದೂರ ಸರಿದಿದ್ದಾರೆ.

ಇದನ್ನೂ ಓದಿ : https://vijayatimes.com/shatrughan-sinha-political-statement/

ಇನ್ನು ಬಿಜೆಪಿ ಸೇರಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್‍ರನ್ನು ಕಣಕ್ಕಿಳಿಸಲು ಸುಮಲತಾ ಅವರು ಮುಂದಾಗಿದ್ದಾರೆ. ಈಗಾಗಲೇ ಮದ್ದೂರಿನಲ್ಲಿ ಅನೇಕ ಸಭೆಗಳನ್ನು ನಡೆಸುತ್ತಿದ್ದು, ಹಲವು ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Tags: bjpKarnatakapoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.