• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೇಲರ್​ ಬಿಡುಗಡೆ

Sharadhi by Sharadhi
in ಮನರಂಜನೆ
‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೇಲರ್​ ಬಿಡುಗಡೆ
0
SHARES
0
VIEWS
Share on FacebookShare on Twitter

ಓಂ ನಮಃ ಶಿವಾಯ ಮೂವೀಸ್​ ಲಾಂಛನದಲ್ಲಿ ಗಣಪತಿ ಪಾಟೀಲ್ ಬೆಳಗಾವಿ ನಿರ್ಮಾಣದಲ್ಲಿ ಸಿದ್ಧವಾದ ಚಿತ್ರ ‘ಮುಖವಾಡ ಇಲ್ಲದವನು 84’ ಎಂಬ ಚಿತ್ರದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ಸೋಮವಾರ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ನೆರವೇರಿತು. ಈ ಹೊಸಬರ ತಂಡದ ಶ್ರಮಕ್ಕೆ ನಿರ್ದೇಶಕ ರವಿ ಶ್ರೀವತ್ಸ ಮತ್ತು ವೇಣುಗೋಪಾಲ್​ ಅತಿಥಿಯಾಗಿ ಆಗಮಿಸಿ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ.

ಈ ಚಿತ್ರಕ್ಕೆ ಗಣಪತಿ ಪಾಟೀಲ್​ ಬೆಳಗಾವಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವೃತ್ತಿಯಲ್ಲಿ ಮೆಡಿಕಲ್​ ಕೆಲಸದಲ್ಲಿದ್ದು, ದೂರದ ನ್ಯೂಜಿಲೆಂಡ್​ನಲ್ಲಿ ವಾಸವಾಗಿದ್ದಾರೆ. ತುಂಬ ವರ್ಷಗಳಿಂದಲೂ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಬೇಕು ಎಂದೆನಿಸಿದಾಗ ‘ಮುಖವಾಡ ಇಲ್ಲದವನು 84’ ಚಿತ್ರದ ಮೂಲಕ ಆಗಮಿಸಿದ್ದಾರೆ. ಇದೀಗ ಎಲ್ಲ ಶೂಟಿಂಗ್‌ ಕೆಲಸಗಳನ್ನು ಮುಗಿಸಿಕೊಂಡಿರುವ ಇಡೀ ತಂಡ, ಬಿಡುಗಡೆಯ ಸಿದ್ಧತೆಯಲ್ಲಿದೆ.

ಈ ಬಗ್ಗೆ ಮಾತನಾಡಿದ ರವಿ ಶ್ರೀವತ್ಸ, ‘ಕಳೆದ ಎರಡು ವರ್ಷಗಳ ಹಿಂದೆ ಸಿನಿಮೋತ್ಸವದಲ್ಲಿ ನಿರ್ಮಾಪಕರು ಪರಿಚಯವಾಗಿದ್ದು, ಅಂದಿನಿಂದ ಅವರಲ್ಲಿ ಸಿನಿಮಾ ಬಗ್ಗೆ ಅಪಾರ ಹಸಿವು ಮತ್ತು ತುಡಿತ ಇರುವುದನ್ನು ನಾನು ಗಮನಿಸಿದ್ದೇನೆ. ಸಿನಿಮಾ ಮಾಡುತ್ತಿರುವ ಬಗ್ಗೆಯೂ ಅವರು ಹೇಳಿಕೊಂಡಿದ್ದರು. ಅದರಂತೆ ಇದೀಗ ಚಿತ್ರ ಸಿದ್ಧವಾಗಿದೆ. ಚಿತ್ರಮಂದಿರಗಳೂ ಹಸಿದು ಕುಳಿತಿವೆ. ಬೇಗ ಚಿತ್ರಮಂದಿರಕ್ಕೆ ಬನ್ನಿ ಎಂದು ತಂಡಕ್ಕೆ ಹಾರೈಸಿದರು.

ಇನ್ನು ಚಿತ್ರದ ಬಗ್ಗೆ ಮಾಹಿತಿ ನೀಡಿರುವ ನಿರ್ಮಾಪಕರು, ಎರಡು ವರ್ಷದ ಹಿಂದೆ ಶಿವಕುಮಾರ್ ಪರಿಚಯವಾಗಿದ್ದು, ಸಿನಿಮಾ ಮಾಡುವ ಬಗ್ಗೆ ನಿರ್ಧಾರ ಅಂತಿಮವಾಗುತ್ತಿದ್ದಂತೆಯೇ, ಒಂದೇ ವಾರದಲ್ಲಿ ಶೂಟಿಂಗ್​ ತಯಾರಿ ನಡೆಸಿ 40 ದಿನದಲ್ಲಿ ಚಿತ್ರೀಕರಣವನ್ನೂ ಮುಗಿಸಿದೆವು. ತುಂಬ ವಿಭಿನ್ನ ಶೈಲಿಯ ಸಿನಿಮಾ ಇದಾಗಿದ್ದು, ಸಂಭಾಷಣೆಗಳಲ್ಲಿ ತುಂಬ ಅರ್ಥವಿದೆ‘ ಎಂದರು.

ಶಿವಕುಮಾರ್ ಕಡೂರು ನಿರ್ದೇಶನದ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಈ ಮೊದಲು ಡ್ರೆಸ್​ ಕೋಡ್​ ಚಿತ್ರ ನಿರ್ದೇಶಿಸಿರುವ ಅನುಭವ ಅವರಿಗಿದೆ. ‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಆಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂದು ನಿರ್ದೇಶಕರು ನುಡಿದಿದ್ದಾರೆ.

ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್​ ಮತ್ತು ಹರೀಶ್​ ಸಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ದುರ್ಗಾ ಪ್ರಸಾದ್​ ಸಂಗೀತ, ಡಾ. ಮಹಾರಾಜಾ ಹಿನ್ನೆಲೆ ಸಂಗೀತ, ಮಧು ಆರ್ಯ ಕ್ಯಾಮರಾ ಜವಾಬ್ದಾರಿ ನಿಭಾಯಿಸಿದರೆ, ಕಥೆ, ಚಿತ್ರಕತೆ ಸಂಭಾಷಣೆ ಮತ್ತು ನಿರ್ದೇಶನವನ್ನು ಶಿವಕುಮಾರ್ ಮಾಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮಾಣ ಪತ್ರ ಪಡೆದುಕೊಂಡಿರುವ ಈ ಸಿನಿಮಾ ಡಿಸೆಂಬರ್​ ವೇಳೆಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದು.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.