ಮುಂಬೈ ಕರ್ನಾಟಕ ಹೆಸರು ಮರುನಾಮಕರಣ

ಬೆಂಗಳೂರು ನ 9 : ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು  ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟ ನಿರ್ಧರಿಸಿದೆ.

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸುವ ಬಗ್ಗೆ ಬಹುದಿನಗಳಿಂದ ಚರ್ಚೆ ನಡೆಯುತ್ತಾ ಬಂದಿದೆ.  ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಇದೀಗ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈಗಾಗಲೇ ಹೈದರಾಬಾದ್‌ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಲಾಗಿದೆ. ಅದರಂತೆ ಮುಂಬೈ ಕರ್ನಾಟಕ ಕಿತ್ತೂರು ಕರ್ನಾಟಕವಾಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ.

Exit mobile version