• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈ. ವಿವಿ ಘಟಿಕೋತ್ಸವ: ವಿದೇಶಿ ‘ಗೌನ್’ ಬದಲು ದೇಸಿ ಉಡುಪು ಬಳಕೆಗೆ ಚಿಂತನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮೈ. ವಿವಿ ಘಟಿಕೋತ್ಸವ: ವಿದೇಶಿ ‘ಗೌನ್’ ಬದಲು ದೇಸಿ ಉಡುಪು ಬಳಕೆಗೆ ಚಿಂತನೆ
0
SHARES
0
VIEWS
Share on FacebookShare on Twitter

ಮೈಸೂರು, ಡಿ. 31: ಶತಮಾನದ ‌ಇತಿಹಾಸವಿರುವ ಪ್ರತಿಷ್ಠಿತ ಮೈಸೂರು ವಿವಿ ಸೇರಿದಂತೆ ‌ಹಲವು‌ ವಿಶ್ವವಿದ್ಯಾಲಯಗಳಲ್ಲಿ ದಶಕಗಳಿಂದ ಚಾಲ್ತಿಯಲ್ಲಿರುವ ‘ಗೌನ್’(ಘಟಿಕೋತ್ಸವ ಉಡುಪು) ಬದಲಾವಣೆಗೆ ಮೈಸೂರು ವಿವಿ ಚಿಂತನೆ ನಡೆಸಿದೆ.

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಪರೀಕ್ಷಾಂಗ ಕುಲಸಚಿವರ ನೇತೃತ್ವದಲ್ಲಿ ಸಿಂಡಿಕೇಟ್ ಉಪ ಸಮಿತಿ ರಚಿಸಲಾಗಿದೆ. ಈ ಸಂಬಂಧ ಬೇರೆ ವಿ.ವಿ.ಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ‘ಗೌನ್’ ಬದಲಾವಣೆ ಸಂಬಂಧ ಸ್ಟ್ಯಾಚೂಟ್ ಮಾರ್ಪಾಡಿಗೆ ಪೂರಕವಾಗುವಂತೆ ಅಧ್ಯಯನ ವರದಿ ನೀಡಲು ಕೋರಿದೆ.

ಸಿಂಡಿಕೇಟ್‌ನ 8ನೇ ಸಾಮಾನ್ಯ ಸಭೆಯ ಕಾರ್ಯಸೂಚಿಯಲ್ಲಿ ಮೈಸೂರು ವಿವಿ ಘಟಿಕೋತ್ಸವದ ಪ್ರಚಲಿತ ಉಡುಪನ್ನು (ಗೌನ್) ಬದಲಾಯಿಸಬೇಕೆಂದು ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ಅವರು ಮನವಿ ಮಾಡಿದ್ದರು.

ಮೈಸೂರು ವಿವಿ ತನ್ನ 100ನೇ ಘಟಿಕೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಿದ್ದು, ಮತ್ತು ದೇಶಕ್ಕೆ ಸ್ವತಂತ್ರ ಬಂದು 73 ವರ್ಷಗಳ ನಂತರವೂ ಘಟಿಕೋತ್ಸವದ ಸಂದರ್ಭದಲ್ಲಿ ಕುಲಾಧಿಪತಿಗಳು, ಕುಲಪತಿಗಳು, ಕುಲಸಚಿವರು, ಆಡಳಿತ ಮಂಡಳಿಯ ಸದಸ್ಯರು ಮತ್ತು ಇನ್ನಿತರ ಗಣ್ಯರು ಸಾಂಪ್ರದಾಯಿಕ ಯುರೋಪಿಯನ್ (ಬ್ರಿಟೀಷ್) ಕಪ್ಪು ನಿಲುವಂಗಿ (ಗೌನ್) ಅನ್ನು ಈಗಲೂ ಧರಿಸುತ್ತಿರುವುದು ಪಾಶ್ಚಾತ್ಯರ ಅಂಧಾನುಕರಣೆ, ವಸಾಹತುಶಾಹಿ ಹಾಗೂ ದಾಸ್ಯದ ಮನೋಭಾವನೆಯ ಪ್ರತೀಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಕೈಮಗ್ಗ ಬಟ್ಟೆಗಳಿಂದ ಮಾಡಿದ ಸ್ಥಳೀಯ ಪರಿಸರಕ್ಕೆ, ವಾತಾವರಣಕ್ಕೆ (ಹವಾಗುಣ) ಹೊಂದುವಂತಹ, ಸ್ವದೇಶಿ ಆಧಾರಿತ ಹಾಗೂ ಭಾರತೀಯ ಸಂಸ್ಕೃತಿ ಪರಂಪರೆ ಬಿಂಬಿಸುವಂತಹ ಸಾಂಪ್ರದಾಯಿಕ ಉಡುಪನ್ನು ಘಟಿಕೋತ್ಸವದಲ್ಲಿ ಧರಿಸಬೇಕೆಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಪರೀಕ್ಷಾಂಗ ಕುಲಸಚಿವ ನೇತೃತ್ವದಲ್ಲಿ ಸಿಂಡಿಕೇಟ್ ಉಪ ಸಮಿತಿ ರಚಿಸಲಾಗಿದೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.