ಮೈಸೂರು ಸ್ಯಾಂಡಲ್ ನಕಲಿ​ ಸೋಪ್ ತಯಾರಿಕೆ ಕೇಸ್: ಆರೋಪಿಗಳು ಇಬ್ಬರೂ ಬಿಜೆಪಿ ನಾಯಕರು ಎಂದ ಪ್ರಿಯಾಂಕ್​ ಖರ್ಗೆ

Bengaluru: ಹೈದರಾಬಾದ್​ನಲ್ಲಿ (Hyderabad) ಮೈಸೂರು ಸ್ಯಾಂಡಲ್ (Mysore Sandal Fake Soap Case) ನಕಲಿ​ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟ

ಇಬ್ಬರೂ ಕಾರ್ಖಾನೆ ನಡೆಸುತ್ತಿದ್ದ ಆರೋಪಿಗಳಾದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಆರೋಪಿತ ಜೈನ್​ಗಳಿಬ್ಬರೂ ಬಿಜೆಪಿಯ (BJP)

ಸಕ್ರಿಯ ನಾಯಕರು, ಕಾರ್ಯಕರ್ತರು ಎಂದು ಐಟಿಬಿಟಿ ಸಚಿವ (Mysore Sandal Fake Soap Case) ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಹಾಗೂ ಬಿಜೆಪಿಯ ರಾಜಾ ಸಿಂಗ್ ಜೊತೆಗೆ ನಿಕಟ ಸಂಪರ್ಕದಲ್ಲಿ ಇದ್ದಾರೆ ಎಂದು ಆರೋಪ ಮಾಡಿದ್ದು, ಸಚಿವ ಎಂಬಿ ಪಾಟೀಲ್ ಅವರಿಗೆ ಅನಾಮಿಕನೊಬ್ಬ ಕರೆ ಮಾಡುತ್ತಾನೆ. ಮೈಸೂರು ಸ್ಯಾಂಡಲ್

ನಕಲಿ​ ಸೋಪ್ ಮಾರಾಟದ ಬಗ್ಗೆ ಮಾಹಿತಿ ನೀಡುತ್ತಾನೆ. ಎಂ.ಬಿ ಪಾಟೀಲ್​ ಅವರು ಇಲ್ಲಿನ ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ತಯಾರಿಕಾ ಘಟದ ವ್ಯವಸ್ಥಾಪಕ

ನಿರ್ದೇಶಕರಿಗೆ ಮಾಹಿತಿ ನೀಡುತ್ತಾರೆ. ನಂತರ ನಮ್ಮ ಅಧಿಕಾರಿಗಳು ನಕಲಿ ಸೋಪ್ ತಯಾರಿಕೆ ಮತ್ತು ಮಾರಾಟ ಜಾಲ ಪತ್ತೆ ಹಚ್ಚಲು ಮುಂದಾದರು ಎಂದು ತಿಳಿಸಿದರು.

ಹೈದರಾಬಾದ್​ಗೆ ಬಳಿಕ ನಮ್ಮ ಅಧಿಕಾರಿಗಳು ತೆರಳಿ 25ಲಕ್ಷ ರೂ. ಆರ್ಡರ್ ಇದೆ ಅಂತ ಹೇಳುತ್ತಾರೆ. ಬಹಳ ದೊಡ್ಡ ಆರ್ಡರ್ ಇರುವುದರಿಂದ ಕಾರ್ಖಾನೆಗೆ ಬರುತ್ತೇವೆ ಎಂದು ನಮ್ಮ ಅಧಿಕಾರಿಗಳು

ಹೇಳುತ್ತಾರೆ.

ಬಹಳ ಸೂಕ್ಷ್ಮವಾಗಿ ಈ ಕಾರ್ಯಾಚರಣೆ ನಡೆಯುತ್ತದೆ. ನಕಲಿ ಎಂದು ಖಚಿತವಾದ ಮೇಲೆ, ನಮ್ಮ ಅಧಿಕಾರಿಗಳು ಕಾರ್ಖಾನೆ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ನಕಲಿ ಸೋಪ್​ ಮತ್ತು ಕವರ್​ಗಳು

ಪತ್ತೆಯಾಗಿವೆ ಎಂದರು.

ಚಿತ್ತಾಪುರದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ (Manikanta Rathod) ಹಾಗೂ ಮಾಜಿ ಶಾಸಕರ ಪುತ್ರನ ಜೊತೆ ಆರೋಪಿತರ ಸಂಪರ್ಕವಿದೆ. ಕಾರ್ಯಾಚರಣೆ ನಡೆದಿರುವುದು

ರಾಜ್ಯದ ಆಸ್ತಿ ಉಳಿಸಿಕೊಳ್ಳುವುದಕ್ಕಾಗಿ. ಇದರಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದಾರೆ. ಬಿಜೆಪಿಯವರು ದುಡ್ಡು ಮಾಡುವುದಕ್ಕೆ ಯಾವುದಕ್ಕೂ ಹೇಸುವುದಿಲ್ಲ ಎಂದು ವಾಗ್ದಾಳಿ ಮಾಡಿದರು.

ಅಷ್ಟೇ ಅಲ್ಲದೆ ಪ್ರಕರಣ ಸಂಬಂಧ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ಮೇಲೆ ಎಫ್ಐಆರ್ (FIR) ದಾಖಲಾಗಿದೆ.

ನಕಲಿ ಸೋಪ್ ತಯಾರಕ ಮಹಾವೀರ್ ಜೈನ್, ಬಿಜೆಪಿಯ ಎಂಎಲ್ಎಗಳ (MLA) ಜೊತೆಗೆ ಇದ್ದಾನೆ. ಕನ್ನಡಿಗರು ಕಷ್ಟಪಟ್ಟು ಬೆವರು ಸುರಿಸಿ ಬಂಡವಾಳ ಹಾಕಿದ್ದನ್ನು ನಕಲಿ ಮಾಡಿ ಮಾರಾಟ

ಮಾಡುತ್ತಿದ್ದಾರೆ.


ಬಿಜೆಪಿಯ ಅಧಿಕೃತ ಪದಾಧಿಕಾರಿಗಳ ಜೊತೆಗೆ ಮಹಾವೀರ್ ಜೈನ್ (Mahaveer Jain) ಇದ್ದಾನೆ. ಮಣಿಕಂಠ ರಾಥೋಡ್​ಗೂ ನಕಲಿ ಸೋಪ್ ತಯಾರಿಕರಿಗೂ ಏನು ನಂಟು? ಪ್ರಥ್ವಿಸಿಂಗ್

ಸಲುವಾಗಿ ಎರಡು ದಿನ ಕಲಾಪ ಹಾಳು ಮಾಡಿದರು. ಈ ಪ್ರಥ್ವಿ ಸಿಂಗ್ ಪೊಲೀಸ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಯಾಕೆ ಇವರೆಲ್ಲ ಬಿಜೆಪಿಯವರೇ ಸಿಗುತ್ತಾರೆ? ಎಂದು ಪ್ರಶ್ನಿಸಿದರು.

ಬಿಜೆಪಿಯು ರಾಜ್ಯದ ಆಸ್ತಿ ಮಾರಾಟ ಮಾಡುವವರುಗೆ ಟಿಕೆಟ್ ನೀಡುತ್ತದೆ. ಯಾದಗಿರಿಯಲ್ಲಿ 700 ಕ್ವಿಂಟಾಲ್ ಗರೀಬ್ ಕಲ್ಯಾಣ್ ಅಕ್ಕಿ ಬಿಜೆಪಿಯವರ ಗೋಡೌನ್​ನಲ್ಲಿ ಸಿಕ್ಕಿದೆ. ಅಕ್ಕಿ ಕದ್ದವರ‌ನ್ನು

ಪ್ರಧಾನಿ ಮೋದಿ ಪಕ್ಷದಲ್ಲಿ ಯಾಕೆ ಇಟ್ಕೊಂಡಿದ್ದೀರಿ? ಇವರ ಮೇಲೆ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ. ತೆಲಂಗಾಣ (Telangana DCM) ಡಿಸಿಎಂ ಜೊತೆಗೆ ತನಿಖೆ ಮಾಡುವ ಬಗ್ಗೆ ಮಾತನಾಡಿದ್ದೇವೆ.

ಆರೋಪಿತರ ತಪ್ಪಿಲ್ಲ ಅಂತ ಬಿಜೆಪಿಯವರು ಸಾಬೀತುಪಡಿಸಲಿ. ಎಂದು ಸವಾಲೆಸೆದಿದ್ದಾರೆ.

ರಾಮಯಣವನ್ನು ಬಿಜೆಪಿಯಲ್ಲಿರುವ ಯಾರು ಕೂಡ ಓದಿಲ್ಲ. 4 ಸಾಲು ಹನುಮಾನ್ ಚಾಲೀಸಾ (Hanuman Chalisa) ಕೂಡ ಓದಲು ಬಿಜೆಪಿಯವರಿಗೆ ಬರಲ್ಲ. ಬಿಜೆಪಿಯವರಿಗೆ ಪ್ರಾಣ ಪ್ರತಿಷ್ಠಾಪನೆಯ

ಅರ್ಥವೇ ಗೊತ್ತಿಲ್ಲ. ಶಂಕರಾಚಾರ್ಯರ ಪೀಠದ ಶ್ರೀಗಳ ಪ್ರಶ್ನೆಗೆ ಉತ್ತರ ಕೊಡಲಿ ಸಾಕು. ಬಿಜೆಪಿ ನಾಯಕರಿಗೆ ಕಾಂಗ್ರೆಸ್​ನವರು (Congress) ಪ್ರಶ್ನೆ ಕೇಳುತ್ತಿಲ್ಲ. ಶಂಕರಾಚಾರ್ಯರು ಕೇಳಿದ ಪ್ರಶ್ನೆಗೆ

ಬಿಜೆಪಿಯವರು ಉತ್ತರ ಕೊಡಲಿ ಎಂದರು.

Exit mobile version