ಮೈಸೂರು, ಜ. 04: ನಟ ಕಿಚ್ಚ ಸುದೀಪ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ರಂಗಿತರಂಗ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿದ ನಟ ಸುದೀಪ್ ತಾಯಿ ಚಾಮುಂಡಿಯ ದರ್ಶನ ಪಡೆದರು. ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ.
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂದುರುಗಿ ಬರುವಾಗ ಕಿಚ್ಚ ಸುದೀಪ ಅವರು, ಅಪಘಾತದಲ್ಲಿ ಕಾಲನ್ನು ಕಳೆದುಕೊಂಡಿದ್ದ ಹಿರೇಮರಳಿ . ಪಾಂಡವಪುರ ತಾಲ್ಲೂಕಿನ ಮಂಡ್ಯಜಿಲ್ಲೆ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.