ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿರುವ ಅನ್ನದಾತರು

ಬೆಂಗಳೂರು, ಡಿ. 08: ಭಾರತ್ ಬಂದ್ ಬೆನ್ನಲ್ಲೇ ನಾಳೆ ಕರ್ನಾಟಕದಲ್ಲಿ ರೈತರು ಪ್ರತಿಭಟನೆಗೆ ಇಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಸುತ್ತಿರುವ ಪ್ರತಿಭಟನೆ ಮತ್ತಷ್ಟು ತಾರಕ್ಕೆ ಏರಲಿದೆ. ನಾಳೆ ವಿಧಾನಸೌಧಕ್ಕೆ ರೈತರು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

ಈ ವಿಚಾರವಾಗಿ ಮಾಹಿತಿ ನೀಡಿದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾಳೆಯಿಂದ ನಮ್ಮ ರೈತರ ಹೋರಾಟ ಮತ್ತಷ್ಟು ಚುರುಕು ಪಡೆಯಲಿದೆ. ಇಂದಿನ ಭಾರತ್ ಬಂದ್ ಬಳಿಕ ನಾಳೆಯೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ. ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳ ವಾಪಸ್‌ ವಿರುದ್ಧ ನಮ್ಮ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ನಾಳೆ ವಿಧಾನ ಸೌಧ ಮುತ್ತಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಈ ಮೂಲಕ ರೈತ ವಿರೋಧಿ ಮಸೂದೆಗಳ ವಿರುದ್ಧ ತೀವ್ರವಾಗಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

Exit mobile version