ಬೆಂಗಳೂರು ಸೆ 6 : ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದ್ದು, ಬಿಜೆಪಿಗೆ ಮತ ಹಾಕಿದ ಎಲ್ಲಾ ಮತದಾರರಿಗೂ ಧನ್ಯವಾದಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ಟವೆಲ್ ಹಾಕಿಟ್ಟುಕೊಂಡವರು ಇನ್ನುಆ ಟವೆಲ್ಗಳನ್ನು ತೆಗೆಯಬಹುದು. ಪ್ರಸ್ತುತ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅಧ್ಯಕ್ಷರಾಗಿ ಸೋತಿದ್ದಾರೆ ಜೊತೆಗೆ ಸಿದ್ಧರಾಮಯ್ಯ ಪಕ್ಷ ಸಂಘಟನೆಗಾಗಿ ಎಲ್ಲೂ ಪ್ರವಾಸ ಮಾಡಿಲ್ಲ ಎಂಬುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ. ಬೆಳಗಾವಿಯಲ್ಲಿ ವಿಪಕ್ಷಗಳಿಗೆ ಒಂದು ಸಂದೇಶ ನೀಡುವ ನಿಟ್ಟಿನಲ್ಲಿ ಅಭ್ಯರ್ಥಿಗಳನ್ನು ಚುನಾವಣೆಗೆ ಇಳಿಸಿದ್ದೆವು ಕಾರ್ಯಕರ್ತರ ಶ್ರಮದಿಂದಲೇ ಈ ಗೆಲುವು ದೊರೆತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಸಾಧನೆಗಳು, ಯಡಿಯೂರಪ್ಪ ಅವರ ಎರಡು ವರ್ಷದ ಅಭಿವೃದ್ಧಿ ಪರ ಆಡಳಿತ, ಸಿಎಂ ಬೊಮ್ಮಾಯಿ ಅವರ ಅಮೃತ ಕಲ್ಪನೆಯ ಯೋಜನೆಗಳಿಗೆ ಜನರ ಬೆಂಬಲ ದೊರೆತಿದೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಜನಮನ್ನಣೆ ದೊರೆತಿದೆ ಎಂದು ಅವರು ಹೇಳಿದರು.