ಕಾರ್ಕಳ ಅ 21 : ತಲೆ ಮರೆಸಿಕೊಂಡಿರುವ ಇಬ್ಬರು ನಕ್ಸಲ್ವಾದಿಗಳ ವಿರುದ್ಧ ವಿಶೇಷ ನ್ಯಾಯಾಲಯವು ಬಂಧಿಸುವದುಕ್ಕಾಗಿ ವಾರೆಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಅಲಿಯಾಸ್ ಗೀತಾ ಅಲಿಯಾಸ್ ಸಿಂಧು ಮತ್ತು ರಾಯರು ಜಿಲ್ಲೆಯ ಅರೋಲಿ ಗ್ರಾಮದ ಅಂಬೇಡ್ಕರ್ ಕಾಲೋನಿಯ ಮಹೇಶ್ ಅಲಿಯಾನ್ ಜಯಣ್ಣ ಅಲಿಯಾನ್ ಜಾನ್ ಅಲಿಯಾಸ್ ಮಾರಪ್ಪ ತಲೆ ಮರೆಸಿಕೊಂಡಿರುವ ಆರೋಪಿಗಳಾಗಿದ್ದಾರೆ.
ಪಶ್ಚಿಮಘಟ್ಟದಲ್ಲಿ ನಡೆಯುತ್ತಿದ್ದ ನಕ್ಸಲ್ ಚಳುವಳಿಯಲ್ಲಿ ಅವರು ಸಕ್ರಿಯಾರಾಗಿದ್ದರು ಎಂದು ತಿಳಿದುಬಂದಿದ್ದು. ಈ ಹಿಂದೆ ಕೂಡ ಕರ್ನಾಟಕ ಪೊಲೀಸರು ಇವರ ಪತ್ತೆಗಾಗಿ ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ.
ನ್ಯಾಶನಲ್ ಇನ್ವೇಷ್ಟಿಗೇಶನ್ ಏಜೆನ್ಸಿ ಹೌಸ್ ನಂಬರ್ 28/ 443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರ ಮಾಹಿತಿ ಗೌಪ್ಯವಾಗಿರಿಸಲಾಗುವುದೆಂದು ತಿಳಿಸಲಾಗಿದೆ.