- ಮೋಹನ್ ಶೆಟ್ಟಿ
ಕರನಾಡಲ್ಲಿ ಕನ್ನಡಕ್ಕಿಲ್ಲ ಆದ್ಯತೆ, ಪ್ರಾಮುಖ್ಯತೆ.! ಹೌದು, ಕನ್ನಡಿಗರಿಗೆ ಬೇಸರ ತರುವಂತ ಒಂದು ರೀತಿಯ ಆದೇಶವೊಂದನ್ನು ಹೈಕೋರ್ಟ್ ನೀಡಿದೆ. ಅದೇನೆಂದರೆ ಪದವಿ ವಿದ್ಯಾರ್ಥಿಗಳು ಅಂದರೆ ಯುಜಿಸಿ ವಿದ್ಯಾರ್ಥಿಗಳಿಗೆ ಮುಂದಿನ ಆದೇಶದವರೆಗೆ, ಪದವಿಯಲ್ಲಿ ಕನ್ನಡ ಭಾಷೆಯನ್ನು ತೆಗೆದುಕೊಳ್ಳಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯವಾಗಿ ತೆಗೆದುಕೊಳ್ಳುವಂತೆ ಒತ್ತಾಯ ಹೇರುವಂತಿಲ್ಲ.
ರಾಜ್ಯ ಸರ್ಕಾರ ಹೊರಡಿಸಿದ ಸುತ್ತೋಲೆಗಳನ್ನು ಆಧರಿಸಿ ಅದನ್ನು ಮುಂದುವರಿಸಲು ಒತ್ತಾಯಿಸಬಾರದು ಎಂದು ಹೈಕೋರ್ಟ್ ಗುರುವಾರ ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್.ಇ.ಪಿ) ಅನುಷ್ಠಾನದ ಆಧಾರದ ಮೇಲೆ, ಉನ್ನತ ಅಧ್ಯಯನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯ ವಿಷಯವಾಗಿ ಅನುಷ್ಠಾನಗೊಳಿಸುವ ವಿಷಯವು ಪರಿಗಣಿಸಬೇಕಾದ ಪ್ರಶ್ನೆಯಾಗಿದೆ ಎಂದು ನಾವು ಭಾವಿಸುತ್ತೇವೆ. ಹಾಗಾಗಿ, ಈ ಹಂತದಲ್ಲಿ ರಾಜ್ಯ ಸರ್ಕಾರವು ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲು ಒತ್ತಾಯಿಸುವಂತಿಲ್ಲ. ಸರ್ಕಾರವು ಈ ಶೈಕ್ಷಣಿಕ ವರ್ಷದಿಂದ ಎನ್.ಇ.ಪಿ ೨೦೨೦ ಅನ್ನು ಜಾರಿಗೊಳಿಸುವ ನೆಪದಲ್ಲಿ ಕನ್ನಡವನ್ನು ಕಡ್ಡಾಯ ಭಾಷೆಯನ್ನಾಗಿ ಮಾಡುವ ರಾಜ್ಯದ ನೀತಿಯನ್ನು ಹೈಕೋರ್ಟ್ ಪ್ರಶ್ನಿಸಿದೆ.
ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ಎನ್.ಇ.ಪಿ ೨೦೨೦ ಅನ್ನು ಜಾರಿಗೊಳಿಸುವ ನೆಪದಲ್ಲಿ ಪದವಿಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನೀತಿಯ ಕುರಿತು ಕೇಂದ್ರದ ನಿಲುವನ್ನು ಸ್ಪಷ್ಟಪಡಿಸಲು ನರಗುಂದ ಅವರು ಹೆಚ್ಚಿನ ಸಮಯವನ್ನು ಕೋರಿದರು. ಏಕೆಂದರೆ ಕೇಂದ್ರವು ಈ ನಿಟ್ಟಿನಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುದಿರುವುದರಿಂದ, ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳೊಂದಿಗೆ ಸಮಾಲೋಚನೆ ಅಗತ್ಯವಿದೆ ಎಂದು ತಿಳಿಸಿದೆ.
ಮಧ್ಯಂತರ ಆದೇಶದ ಪ್ರಯೋಜನವನ್ನು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸೀಮಿತಗೊಳಿಸುವಂತೆ ಎಜಿ ಮನವಿ ಮಾಡಿದಾಗ, ಪೀಠವು ಮೌಖಿಕವಾಗಿ ಎಲ್ಲಾ ವಿದ್ಯಾರ್ಥಿಗಳು ಮಧ್ಯಂತರ ಆದೇಶದ ಪ್ರಯೋಜನವನ್ನು ಪಡೆಯಬೇಕು ಎಂದು ತಿಳಿಸಿತು. ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಪೀಠವು ಮುಂದಿನ ವಿಚಾರಣೆಯನ್ನು ಮುಂದೂಡುವಾಗ ಎಜಿಗೆ ಮೌಖಿಕವಾಗಿ ತಿಳಿಸಿದೆ.