- ಕರ್ನಾಟಕ ಸಿವಿಲ್ ಸೇವಾ ನೇಮಕಾತಿಗೆ ವಯೋಮಿತಿ (new decision in karnataka civil service recruitment) ಸಡಿಲಿಕೆ: ಸರ್ಕಾರಿ ಉದ್ಯೋಗಾರ್ಥಿಗಳಿಗೆ ದೊಡ್ಡ ಅವಕಾಶ
- ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಐದು ವರ್ಷ ಹೆಚ್ಚುವರಿ ಅವಕಾಶ ನೀಡುವ ನಿರ್ಧಾರ
- ಸರ್ಕಾರಿ ಉದ್ಯೋಗದ ಕನಸಿಗೆ ಅಡ್ಡಿಯಾಗಿದ್ದ ವಯೋಮಿತಿ ಅಡೆತಡೆ ನಿವಾರಣೆ; ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಸಮಾನ ಅವಕಾಶ
Bengaluru: ರಾಜ್ಯದ ಸರ್ಕಾರಿ ಉದ್ಯೋಗಾರ್ಥಿಗಳಿಗೆ ಮಹತ್ವದ (new decision in karnataka civil service recruitment) ನಿರಾಳತೆಯನ್ನು ನೀಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಸಿವಿಲ್ (Civil) ಸೇವಾ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯನ್ನು ಐದು ವರ್ಷಗಳಷ್ಟು ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ.
ಈ ನಿರ್ಧಾರದಿಂದ ಅನೇಕ ವರ್ಷಗಳಿಂದ ವಯೋಮಿತಿ ಕಾರಣದಿಂದ ಅವಕಾಶ ಕಳೆದುಕೊಂಡಿದ್ದ ಅಭ್ಯರ್ಥಿಗಳಿಗೆ ಹೊಸ ಭರವಸೆ ಮೂಡಿದೆ. ಸರ್ಕಾರದ ಈ ಕ್ರಮವು ಉದ್ಯೋಗಾಂಕ್ಷಿಗಳ ದೀರ್ಘಕಾಲದ ಬೇಡಿಕೆಗೆ ಸ್ಪಂದನೆಯಾಗಿ ಪರಿಗಣಿಸಲಾಗುತ್ತಿದೆ.

ಇಲ್ಲಿಯವರೆಗೆ ಕರ್ನಾಟಕ ಸಿವಿಲ್ ಸೇವಾ ನೇಮಕಾತಿಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ (new decision in karnataka civil service recruitment) ವಯೋಮಿತಿ 35 ವರ್ಷಗಳಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 38 ವರ್ಷಗಳವರೆಗೆ ಅವಕಾಶ ಇತ್ತು.
ಇದೀಗ ಈ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ, ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಸಮಾನವಾಗಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲು ಸರ್ಕಾರ ತೀರ್ಮಾನಿಸಿದೆ.
ಈ ನಿಯಮವು 2027ರ ಡಿಸೆಂಬರ್ 31ರೊಳಗೆ ಹೊರಡಿಸಲ್ಪಡುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ ಅನ್ವಯವಾಗಲಿದೆ. ಇದರಿಂದ ಮುಂದಿನ ಎರಡು ವರ್ಷಗಳಲ್ಲಿ ನಡೆಯುವ ವಿವಿಧ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳಲ್ಲಿ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸ್ಪರ್ಧಿಸುವ ಅವಕಾಶ ಪಡೆಯಲಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಉದ್ಯೋಗ ವಿಷಯದ ಜೊತೆಗೆ ಸಾಮಾಜಿಕ ಕಲ್ಯಾಣಕ್ಕೆ ಸಂಬಂಧಿಸಿದ ಹಲವು ಮಹತ್ವದ ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ.
ಅದರಲ್ಲೂ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರಿಗೆ ಶಾಶ್ವತ ವಸತಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಈ ಸಮುದಾಯದ ಕುಟುಂಬಗಳಿಗೆ 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಗಳನ್ನು ನಿರ್ಮಿಸಿ ನೀಡಲು ನಿರ್ಧರಿಸಲಾಗಿದೆ.
ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಲು ಸುಮಾರು 100 ಕೋಟಿ ರೂಪಾಯಿಗಳ ವೆಚ್ಚವನ್ನು ಅಂದಾಜಿಸಲಾಗಿದ್ದು, ಈ ಯೋಜನೆಗೆ ಸಂಪುಟ ಅನುಮೋದನೆ ನೀಡಲಾಗಿದೆ. ಇದು ಸಮಾಜದ ಹಿಂದುಳಿದ ವರ್ಗಗಳಿಗೆ ಭದ್ರ ಜೀವನದ ಆಶಾಕಿರಣವಾಗಲಿದೆ.
ಇದಲ್ಲದೆ, ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಮಠಗಳಿಗೆ ಜಾಗ ಮಂಜೂರು ಮಾಡುವ ಮಹತ್ವದ ನಿರ್ಧಾರಕ್ಕೂ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.
ರಾವುತ್ತನಹಳ್ಳಿ ಗ್ರಾಮದ ಸರ್ವೇ ನಂಬರ್ 57 ಮತ್ತು 58ರಲ್ಲಿ ಇರುವ ಸರ್ಕಾರಿ ಜಮೀನನ್ನು ದಲಿತ ಮತ್ತು ಹಿಂದುಳಿದ ವರ್ಗಗಳ 22 ಮಠಗಳಿಗೆ ಮಂಜೂರು ಮಾಡಲು ತೀರ್ಮಾನಿಸಲಾಗಿದೆ.
ಈ ನಿರ್ಧಾರದಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿವಿಧ ಸಮುದಾಯಗಳು ಸ್ವಾಗತಿಸುತ್ತಿವೆ.
ಪೌಷ್ಠಿಕ ಆಹಾರ ಯೋಜನೆಯ ಭಾಗವಾಗಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸುವ ಮಹತ್ವದ ನಿರ್ಧಾರವನ್ನೂ ಸಂಪುಟ ಕೈಗೊಂಡಿದೆ.
ಒಟ್ಟು 50,046 ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಮುಂದಿನ 12 ತಿಂಗಳವರೆಗೆ ಪೌಷ್ಠಿಕ ಆಹಾರ ಒದಗಿಸಲು ಸುಮಾರು 145.03 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ.
ಈ ಯೋಜನೆಯಿಂದ ಬಡ ಹಾಗೂ ಹಿಂದುಳಿದ ಸಮುದಾಯಗಳ ಪೌಷ್ಠಿಕ ಮಟ್ಟ ಸುಧಾರಣೆಯಾಗುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರದ ಸಾಮಾಜಿಕ ಕಾಳಜಿಯನ್ನು ಮತ್ತೊಮ್ಮೆ ತೋರಿಸುತ್ತದೆ.
ಒಟ್ಟಾರೆ, ಈ ಸಚಿವ ಸಂಪುಟ ಸಭೆಯ ನಿರ್ಧಾರಗಳು ಉದ್ಯೋಗ, ವಸತಿ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಮಹತ್ವದ ಮೈಲಿಗಲ್ಲುಗಳಾಗಿವೆ.
ಇದನ್ನು ಓದಿ : https://vijayatimes.com/health-department-new-plan/