Bengaluru: ರಾಜ್ಯ ಬಿಜೆಪಿಯ (BJP) ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (B.Y.Vijayendra) ಅವರು, ಪಕ್ಷ ಸಂಘಟಿಸುವ (new state president Vijayendra)
ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದು, ಇಂದು (new state president Vijayendra) ಸಾಮಾನ್ಯ ಕಾರ್ಯಕರ್ತನ ಮನೆಗೆ ಭೇಟಿ ನೀಡಿದ್ದಾರೆ.
ಈ ಕುರಿತು ಟ್ವೀಟ್ (Tweet) ಮಾಡಿರುವ ಅವರು, ಮೊದಲ ಹೆಜ್ಜೆ ಬೂತಿನೆಡೆಗೆ, ಗುರಿಯು ಒಂದೇ ಗೆಲುವಿನೆಡೆಗೆ. ಕಾರ್ಯಕರ್ತ ನಮ್ಮ ಶಕ್ತಿ, ಮತದಾರ ನಮ್ಮ ಬಂಧು. ಮತ್ತೆ ಬಿಜೆಪಿ –ಮತ್ತೊಮ್ಮೆ ಮೋದಿ.
ಬೂತ್ ಗೆಲ್ಲಿಸಿ -ದೇಶ ಗೆಲ್ಲಿಸಿ ; ಸಂಕಲ್ಪ ನಮ್ಮದು -ಆಶೀರ್ವಾದ ನಿಮ್ಮದು. ಸಂಘಟನೆಗೆ ನವ ಚೈತನ್ಯ ತುಂಬುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ, ಇಂದು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರಾದ
ಶ್ರೀ ಶಶಿಧರ್ ಅವರ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿಯ ಶುಭ ಕೋರುವುದರೊಂದಿಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಲು ಸಂಕಲ್ಪ ತೊಡಲಾಯಿತು ಎಂದು ಹೇಳಿದ್ದಾರೆ.
ಇನ್ನು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯೇಂದ್ರ ಅವರಿಗೆ ಶುಭ ಕೋರಿರುವ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು, ಕರ್ನಾಟಕ ಬಿಜೆಪಿ
ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾ
ಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ.
ಶ್ರೀ ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಇನ್ನು ವಿಜಯೇಂದ್ರ ಅವರ ನೇಮಕವನ್ನು ಲೇವಡಿ ಮಾಡಿರುವ ರಾಜ್ಯ ಕಾಂಗ್ರೆಸ್ (Congress), ಯಡಿಯೂರಪ್ಪನವರ ಮಗ” ಎಂಬ ಅರ್ಹತೆಯಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ
“ಯಡಿಯೂರಪ್ಪನವರ ಮಗ”ನಿಗೆ ಅಭಿನಂದನೆಗಳು.. “ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ” ಎಂಬ ಸುಳ್ಳನ್ನು ನಂಬಬೇಕು ಎಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇವೆ ಎಂದು ಟ್ವೀಟ್
(Tweet) ಮಾಡಿದೆ.
ಇದನ್ನು ಓದಿ: ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ನ ನಾಚಿಕೆಯಿಲ್ಲದ ಸ್ವಜನಪಕ್ಷಪಾತವನ್ನು ಸಮರ್ಥಿಸಲು ಸಾಧ್ಯವಿಲ್ಲ – ನಟ ಚೇತನ್ ಟೀಕೆ