ಸದ್ಯಕ್ಕೆ ನಾಯಕತ್ವ ಬದಲಾವಣೆ ಇಲ್ಲ – ಅರುಣ್ ಧುಮಲ್

ಮುಂಬೈ ಸೆ 15 : ಐಸಿಸಿ ಟಿ-20 ಕಳೆದ ಕೆಲವು ದಿನಗಳಿಂದ ಚರ್ಚೆಯಲ್ಲಿದ್ದ ನಾಯಕತ್ವ ಬದಲಾವಣೆ ವಿಚಾರಕ್ಕೆ ಬಿಸಿಸಿಐ ತೆರೆ ಎಳೆದಿದ್ದು ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಸೀಮಿತ ಓವರ್ ಗಳ ತಂಡದ ನಾಯಕತ್ವ ತೊರೆಯುವ ಸಾಧ್ಯತೆ ಇದೆ ಎಂಬ ವರದಿಗಳು ಕೇವಲ ಉಹಾಪೋಹ ಎಂದು  ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಸ್ಪಷ್ಟಪಡಿಸಿದ್ದಾರೆ

ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಅವರಿಗೆ ನಾಯಕತ್ವದ ಹಾದಿ ಸುಗಮಗೊಳಿಸುವ ನಿಟ್ಟಿನಲ್ಲಿ ಅಕ್ಟೋಬರ್- ನವೆಂಬರ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಏಕದಿನ ಹಾಗೂ ಟಿ-20 ಪಂದ್ಯಗಳಿಗೆ ಟೀಂ ಇಂಡಿಯಾ ನಾಯಕತ್ವವನ್ನು ಕೊಹ್ಲಿ ತೊರೆಯಲಿದ್ದಾರೆ ಎಂದು ಸುದ್ದಿಯಾಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಅರುಣ್ ಧಮುಲ್, ಇದೆಲ್ಲಾ ಸುಳ್ಳು, ಆ ರೀತಿ ಏನೂ ಆಗುವುದಿಲ್ಲ, ನಾಯಕತ್ವ ವಿಭಜನೆ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಅಥವಾ ಬಿಸಿಸಿಐ ಸಭೆ ನಡೆಸಿಲ್ಲ, ವಿರಾಟ್ ಕೊಹ್ಲಿ ಎಲ್ಲಾ ಮಾದರಿಯ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ್ದಾರೆ.

Exit mobile version