• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ವಾರ್ತಾ ಸಚಿವರ ಭೇಟಿ

Sharadhi by Sharadhi
in ಮನರಂಜನೆ
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ವಾರ್ತಾ ಸಚಿವರ ಭೇಟಿ
0
SHARES
0
VIEWS
Share on FacebookShare on Twitter

ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿ ಇರುವ ಕನ್ನಡ ಚಲನಚಿತ್ರ ಅಮೃತೋತ್ಸವ ಭವನ ಕಟ್ಟಡ ಕಾಮಗಾರಿಗೆ ಅಗತ್ಯ ಅನುದಾನ ಒದಗಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಶ್ರೀ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರ ಮನವಿಗೆ ಸ್ಪಂದಿಸಿದ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

“ಆಯವ್ಯಯ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಮೃತೋತ್ಸವ ಭವನ ಕಟ್ಟಡ ಕಾಮಗಾರಿಗೆ ಅನುದಾನದ ಅಗತ್ಯವಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ತಾವು ಕಟ್ಟಡಕ್ಕೆ ಭೇಟಿ ನೀಡಿದಾಗ ನೆಲ ಮಹಡಿಯಲ್ಲಿ ಸುಸಜ್ಜಿತ ಸಭಾಂಗಣ/ಚಿತ್ರಮಂದಿರ, ತಳ ಮಹಡಿಯಲ್ಲಿನ ಕಾಮಗಾರಿಗಳು ಬಾಕಿ ಇರುವುದು ಗಮನಕ್ಕೆ ಬಂದಿದೆ. ಈ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಬಿಗುಗಡೆಗೊಳಿಸುವ ಸಂಬಂಧ ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಕ್ರಮ ವಹಿಸುವುದಾಗಿ ತಿಳಿಸಿದರು.

ಪೂನಾದ ಭಾರತ ರಾಷ್ಟ್ರೀಯ ಚಲನಚಿತ್ರ ಪ್ರಾಚ್ಯಾಗಾರ (ಎನ್ಎಫ್ಎಐ)ದ ಮಾದರಿಯಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಚಲನಚಿತ್ರ ಭಂಡಾರ ಸ್ಥಾಪಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು, ಕನ್ನಡ ಚಿತ್ರರಂಗದ ಅಪೂರ್ವ ಘಟನೆಗಳನ್ನು ಸಾಕ್ಷೀಕರಿಸುವ, ದಾಖಲಿಸುವ ಹಾಗೂ ಕನ್ನಡ ಚಿತ್ರರಂಗದ ಕುರಿತು ಅಧ್ಯಯನ ದೃಷ್ಟಿಯಿಂದ ಇದೊಂದು ಉತ್ತಮ ಪ್ರಯತ್ನ ಎಂದು ಸಚಿವರು ಶ್ಲಾಘಿಸಿದರು.

ಅಮೃತೋತ್ಸವ ಭವನ ಕಟ್ಟಡದ ಆವರಣದಲ್ಲಿ ಮುಂದಿನ ದಿನಗಳಲ್ಲಿ ಉದ್ದೇಶಿತ ಸಿನಿಮಾ ಕಾಂಪ್ಲೆಕ್ಸ್ ನಿರ್ಮಾಣ ಮಾಡೋಣವೆಂದು ಅಕಾಡೆಮಿ ಅಧ್ಯಕ್ಷರಿಗೆ ಸಚಿವರು ಭರವಸೆ ನೀಡಿದರು.

2017-18ನೇ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸುವುದು, 2019-20ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ರಚಿಸುವುದು, ಅಮೃತೋತ್ಸವ ಭವನ ಕಟ್ಟಡದ ನಿರ್ವಹಣೆಗೆ ವಾರ್ಷಿಕ ಅನುದಾನ ಒದಗಿಸುವುದು, ಪ್ರಾದೇಶಿಕ ಭಾಷಾ ಚಿತ್ರೋತ್ಸವಕ್ಕೆ ಬಂಜಾರ ಭಾಷೆ ಚಿತ್ರೋತ್ಸವ ಸೇರ್ಪಡೆ, ಕೋವಿಡ್-19 ಕಾರಣದಿಂದಾಗಿ ಮುಂದೂಡಲಾಗಿರುವ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸುವುದೂ ಸೇರಿದಂತೆ ವಿವಿಧ ಪ್ರಸ್ತಾವನೆಯನ್ನು ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಶ್ರೀ ಸುನೀಲ್ ಪುರಾಣಿಕ್ ಅವರು ವಾರ್ತಾ ಸಚಿವರ ಗಮನಕ್ಕೆ ತಂದರು.

ಮಾನ್ಯ ಸಚಿವರ ಆಪ್ತ ಕಾರ್ಯದರ್ಶಿ ವಿರೂಪಾಕ್ಷ, ಅಕಾಡೆಮಿ ರಿಜಿಸ್ಟ್ರಾರ್ ಹಿಮಂತರಾಜು ಉಪಸ್ಥಿತರಿದ್ದರು.

Related News

adipurush 2023
ಮನರಂಜನೆ

ಭಾರತವೊಂದರಲ್ಲೇ 6,200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಆದಿಪುರುಷ್ ಬಿಡುಗಡೆ: ಕರ್ನಾಟಕದಲ್ಲಿ ಯಾರು ವಿತರಣೆ?

June 10, 2023
ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ
ಮನರಂಜನೆ

ಅರ್ಜುನ್​ ಸರ್ಜಾ ವಿರುದ್ಧ ಮೀ ಟೂ ಕೇಸ್‌ಗೆ ಬಿಗ್ ಟ್ವಿಸ್ಟ್ : ಶ್ರುತಿ ಹರಿಹರನ್‌ಗೆ ನೋಟಿಸ್​ ಜಾರಿ ಮಾಡಿದ ಖಾಕಿ

June 9, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.