ಇಂದೋರ್, ಮಾ. 13: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ ಇಂದೋರ್ ಮತ್ತು ಭೂಪಾಲ್ನಲ್ಲಿ ರಾತ್ರಿ ಕಫ್ರ್ಯೂ ಜಾರಿ ಮಾಡಲು ನಿರ್ಧರಿಸಿದೆ. ಮಧ್ಯ ಪ್ರದೇಶದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಸಿದೆ. ಹೀಗಾಗಿ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್ ಅವರು ಶುಕ್ರವಾರ ತಡರಾತ್ರಿವರೆಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸಿದರು.
ಇಂದೋರ್ ಮತ್ತು ಭೂಪಾಲ್ನಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಎರಡೂ ಪ್ರದೇಶಗಳಲ್ಲಿ ಭಾನುವಾರ ಅಥವಾ ಸೋಮವಾರದಿಂದ ರಾತ್ರಿ ಕಫ್ರ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜತೆಗೆ ಮಹಾರಾಷ್ಟ್ರದಿಂದ ವಿಮಾನ, ರೈಲು ಮತ್ತು ರಸ್ತೆ ಮಾರ್ಗದ ಮೂಲಕ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೊಳಪಡಿಸಲು ಸರ್ಕಾರ ಆದೇಶಿಸಿದೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಸೋಂಕು ಹೆಚ್ಚಾಗಿರುವುದರಿಂದ ಕೆಲವು ಕಡೆ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಅಲ್ಲಲ್ಲಿ ನೈಟ್ ಕಫ್ರ್ಯೂ ಕೂಡ ಜಾರಿ ಮಾಡಲಾಗಿದೆ. ಇದೀಗ ಮಧ್ಯ ಪ್ರದೇಶ ಸರ್ಕಾರ ಕೂಡ ಮಹಾರಾಷ್ಟ್ರದ ಹಾದಿಯಲ್ಲೇ ಹೆಜ್ಜೆ ಹಾಕಿದೆ.