Patna : ರಾಜಧಾನಿ ದೆಹಲಿಯಲ್ಲಿ ಡಿಸೆಂಬರ್ (December) 6 ರಂದು ನಡೆಯಲಿರುವ (NitishKumar not Participate – INDIA alliance) ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗದಿರಲು
ಬಿಹಾರ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ (NitishKumar not Participate – INDIA alliance) ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ೀ ಕುರಿತು ಮಾಹಿತಿ ನೀಡಿರುವ ಜೆಡಿಯು (JDU), ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಭೆಯಿಂದ ಹೊರಗುಳಿಯುವ ಸಾಧ್ಯತೆಯಿದೆ, ಆದರೆ ಅವರ ಬದಲಿಗೆ ಜೆಡಿಯು ಪಕ್ಷದ
ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಮೂಲಗಳ ಪ್ರಕಾರ, ಜೆಡಿಯು ಮುಖ್ಯಸ್ಥ ಲಾಲನ್ ಸಿಂಗ್ (Lalan Singh) ಮತ್ತು ಬಿಹಾರದ ಜಲಸಂಪನ್ಮೂಲ ಸಚಿವ ಸಂಜಯ್ ಕುಮಾರ್ ಝಾ
(Sanjay Kumar Jha) ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇನ್ನು 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷದ ಬಣದ ನಾಯಕರು ಡಿಸೆಂಬರ್ 6 ರಂದು ದೆಹಲಿಯ ಕಾಂಗ್ರೆಸ್ (Congress) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
(Mallikarjun Kharge) ಅವರ ನಿವಾಸದಲ್ಲಿ ಸಭೆ ಸೇರಲಿದ್ದಾರೆ. ನಾಳೆ (ಬುಧವಾರ) ಸಂಜೆ ನಡೆಯುವ ನಿರೀಕ್ಷಿತ ಸಭೆಯಲ್ಲಿ, ಚುನಾವಣೆಗೆ ಮುನ್ನ ಬಿಜೆಪಿಯನ್ನು ಸಾಮೂಹಿಕವಾಗಿ ಎದುರಿಸಲು
ನಾಯಕರು ತಮ್ಮ ಯೋಜನೆಯನ್ನು ಚರ್ಚಿಸಿ ಅಂತಿಮಗೊಳಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamatha Banerjee) ಅವರು ಉತ್ತರ ಬಂಗಾಳದಲ್ಲಿ ಪೂರ್ವ ನಿಯೋಜನೆಗಳನ್ನು ಉಲ್ಲೇಖಿಸಿ ಸಭೆಯಲ್ಲಿ
ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಇಂಡಿಯಾ (INDIA) ಮೈತ್ರಿಕೂಟದ ಪ್ರಮುಖ ನಾಯಕರೇ ಸಭೆಯಿಂದ ದೂರ ಉಳಿದಿರುವುದು ಕಾಂಗ್ರೆಸ್ಗೆ ಶಾಕ್ ನೀಡಿದೆ.
ಜೆಡಿಯು ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಗಳ ಪ್ರಮುಖ ನಾಯಕರು ಸಭೆಯಿಂದ ದೂರ ಉಳಿಯುವ ಮೂಲಕ ಪರೋಕ್ಷವಾಗಿ, ಕಾಂಗ್ರೆಸ್ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿರುವುದರಿಂದ, ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ನ ನಾಯಕತ್ವವನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿವೆ.
ಬಿಜೆಪಿಯನ್ನು (BJP) ಎದುರಿಸಲು ಕಾಂಗ್ರೆಸ್ ಸಮರ್ಥವಾಗಿಲ್ಲ ಎಂಬ ಅಭಿಪ್ರಾಯ ಪ್ರಾದೇಶಿಕ ಪಕ್ಷಗಳದ್ದು. ಹೀಗಾಗಿ ಮೈತ್ರಿಕೂಟದ ಸಭೆಯಿಂದ ಹೊರಗುಳಿಯುವ ಮೂಲಕ ಕಾಂಗ್ರೆಸ್ ಶಾಕ್
ನೀಡಲು ಕೆಲ ನಾಯಕರು ಮುಂದಾಗಿದ್ದಾರೆ.
ಇದನ್ನು ಓದಿ: ಬೋಟ್ ದುರಂತ: ಅರಬ್ಬಿ ಸಮುದ್ರಕ್ಕೆ ಇಳಿದಿದ್ದ ಬೋಟ್ ಮಿಸ್ಸಿಂಗ್, 40 ಜನ ನಾಪತ್ತೆ