Vijayapura: ಅ. ೩೧ ರಂದು ಬೀಡ್ (Beed) ಜಿಲ್ಲಾ ಬಂದ್ಗೆ ಕರೆ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಬೀಡ್ ಮತ್ತು ಧಾರಾಶಿವ್ ಜಿಲ್ಲೆಯಲ್ಲಿ ಮರಾಠಾ (Maratha) ಮೀಸಲಾತಿ ಕಿಚ್ಚು ತೀವ್ರಗೊಂಡಿದೆ. ಬೀಡ್, ಧಾರಾಶಿವ ಜಿಲ್ಲೆಯಲ್ಲಿ ನಿನ್ನೆ ಹೋರಾಟ ಹಿಂಸಾಚಾರ ರೂಪ ಪಡೆದಿತ್ತು. ಬೀಡ್ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆ ಉಮರಗಾ ತಾಲೂಕಿನ ತುರೋರಿ ಗ್ರಾಮದಲ್ಲಿ ನಿನ್ನೆ ಸಂಜೆ ಕೆಎಸ್ಆರ್ಟಿಸಿ ಬಸ್ಗೆ ಬೆಂಕಿ ಹಚ್ಚಲಾಗಿತ್ತು.
ಮಹಾರಾಷ್ಟ್ರದಲ್ಲಿ (Maharashtra) ಮರಾಠ ಮೀಸಲಾತಿಗಾಗಿ ಪ್ರತಿಭಟನೆ ಮುಂದುವರಿದಿದ್ದು, ಕರ್ನಾಟಕದ ಬಸ್ಗಳಿಗೂ ಬೆಂಕಿ ಹಚ್ಚಲಾಗುತ್ತಿದೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯಿಂದ ಮಹಾರಾಷ್ಟ್ರದ ಕೆಲ ಭಾಗಗಳಿಗೆ ಸಂಪರ್ಕಿಸುವ 42 ಸರ್ಕಾರಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಿಂದ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಸಾರಿಗೆ ಉಪವಿಭಾಗಾಧಿಕಾರಿ ಮೊಹಮ್ಮದ್ (Mohammad) ತಿಳಿಸಿದ್ದಾರೆ.
ಕೆಕೆಆರ್ಟಿಸಿ (KKRTC) ಬಸ್ಗಳು, ಮಹಾರಾಷ್ಟ್ರದ ಪುಣೆ, ಮುಂಬೈ(Mumbai) , ಲಾತೋರ್, ನಾಂದೇಡ್, ತುಳಜಾಪುರ ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳಬೇಕಿದ್ದು, ಸಂಚಾರ ಬಂದ್ ಮಾಡಲಾಗಿದೆ. ಜಿಲ್ಲೆಯಿಂದ ನಿತ್ಯ 124 ಬಸ್ಗಳು ಮಹಾರಾಷ್ಟ್ರಕ್ಕೆ ಸಂಚಾರ ಮಾಡುತ್ತಿದ್ದವು. ಈ ಪೈಕಿ 42 ಬಸ್ಗಳ ಸಂಚಾರ ಬಂದ್ ಮಾಡಲಾಗಿದೆ.
ಸೊಲ್ಹಾಪುರ, ಸಾಂಗ್ಲಿ, ಮೀರಜ್ಗೆ ಮಾತ್ರ ರಾಜ್ಯದ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯದಲ್ಲಿ ಎಂದಿನಂತೆ ಮಹಾರಾಷ್ಟ್ರ ಸರ್ಕಾರಿ ಬಸ್ಗಳು ಸಂಚರಿಸಲಿವೆ. ಮರಾಠಿ ಮೀಸಲಾತಿ ಹೋರಾಟದ ತೀವ್ರತೆಯಿರೋ ಪ್ರದೇಶದಲ್ಲಿ ಸಹಜ ಸ್ಥಿತಿ ಕಂಡು ಬಂದ ನಂತರ ಎಂದಿನಂತೆ ಬಸ್ ಗಳ ಸಂಚಾರ ಆರಂಭಿಸುವುದಾಗಿ ವಿಜಯಪುರ ಜಿಲ್ಲಾ ಸಾರಿಗೆ ಉಪವಿಭಾಗಾಧಿಕಾರಿ ಮೊಹಮ್ಮದ್ ಫಯಾಜ್ ತಿಳಿಸಿದರು.
ಮಹಾರಾಷ್ಟ್ರ ಗಡಿಯಲ್ಲಿ ಭದ್ರತೆ ಹೆಚ್ಚಳ ಮಾಡಿದ್ದೇವೆ. ಎಲ್ಲೆಲ್ಲಿ ಸೆನ್ಸಿಟಿವ್ (Sensitive) ವಾತಾವರಣ ಇದೆ ಅಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಿದ್ದೇವೆ. ಭದ್ರತಾ ವ್ಯವಸ್ಥೆ ಹೆಚ್ಚಳ ಮಾಡಿದ್ದೇವೆ. ಎಂಇಎಸ್ ಕೂಡ ಕರಾಳ ದಿನ ಅಂತ ಮಾಡುತ್ತೆ. ಹಾಗೇನಾದ್ರೂ ಮಾಡಿದ್ರೆ ಅದನ್ನು ತಡೆಯುವ ಕೆಲಸ ಮಾಡ್ತೇವೆ ಎಂದು ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ (Dr.G.Parameshwar) ಪ್ರತಿಕ್ರಿಯೆ ನೀಡಿದ್ದಾರೆ.
ಭವ್ಯಶ್ರೀ ಆರ್.ಜೆ