- ತಾಂತ್ರಿಕ ತೊಂದರೆಗಳ ನಡುವೆ ಸಮೀಕ್ಷೆಯ ವೇಗ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚನೆ
- ಪ್ರತಿದಿನ ಶೇ. 10ರಷ್ಟು ಪ್ರಗತಿ ಗುರಿ
- ಗಣತಿದಾರರಿಗೆ ಉತ್ತಮ ಸಂಭಾವನೆ ಭರವಸೆ
Bengaluru: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜನಪ್ರಿಯವಾಗಿ “ಜಾತಿ ಗಣತಿ” ಎಂದು ಕರೆಯಲ್ಪಡುವ ಕಾರ್ಯ ಇನ್ನೂ ನಿರೀಕ್ಷಿತ ಮಟ್ಟಕ್ಕೆ ತಲುಪಿಲ್ಲ. (no extend in census survey says cm)
ಆರಂಭದ ಕೆಲವೇ ದಿನಗಳಲ್ಲಿ ಕೇವಲ ಶೇ. 2.4ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಪ್ರತಿದಿನ ಕನಿಷ್ಠ ಶೇ. 10ರಷ್ಟು ಪ್ರಗತಿ ಸಾಧಿಸಬೇಕೆಂದು ಅವರು ಕಟ್ಟುನಿಟ್ಟಾಗಿ ಹೇಳಿದ್ದಾರೆ.
ಅಷ್ಟಕ್ಕೂ ಸಮೀಕ್ಷೆಯ ಆರಂಭಿಕ ದಿನಗಳಲ್ಲಿ ತಾಂತ್ರಿಕ ಸಮಸ್ಯೆಗಳು, ಸರ್ವರ್ (Server) ದೋಷಗಳು ಹಾಗೂ ದತ್ತಾಂಶ ಸಂಗ್ರಹಣೆಯ ತೊಂದರೆಗಳು ಎದುರಾಗಿದ್ದವು.
ಆದರೆ ಇದೀಗ ಶೇ. 90 ಕ್ಕೂ ಹೆಚ್ಚು ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ.
ಉಳಿದ ಸಮಸ್ಯೆಗಳನ್ನೂ ತ್ವರಿತವಾಗಿ ಬಗೆಹರಿಸಲಾಗುವುದು ಎಂಬ ಭರವಸೆಯೂ ನೀಡಿದ್ದಾರೆ.(no extend in census survey says cm)
ಇನ್ನು ಈ ಕುರಿತಾಗಿ ಮಾತನಾಡಿರುವ ಸಿಎಂ ಸಿದ್ಧರಾಮಯ್ಯ ಇನ್ನು ಮುಂದೆ ಸಮೀಕ್ಷಾ ಕಾರ್ಯವು ಯಾವುದೇ ಅಡಚಣೆಯಿಲ್ಲದೆ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ.ಕೆಲವು ತಾಂತ್ರಿಕ ಸಮಸ್ಯೆಗಳು ಇತ್ತು.
ಆದರೆ ಅವುಗಳನ್ನು ಬಹುತೇಕ ಪರಿಹರಿಸಲಾಗಿದೆ. ಈಗ ಸಮೀಕ್ಷೆ ನಿಗದಿತ ಅವಧಿಯಲ್ಲೇ ಪೂರ್ಣಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ (Video Conference) ಮೂಲಕ ಸಭೆ ನಡೆಸಿದರು.
ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯಕ್, ಡಿಸಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳು ಪಾಲ್ಗೊಂಡಿದ್ದರು.
ಸಭೆಯ ವೇಳೆ ಸಮೀಕ್ಷೆಯ ನಿಧಾನಗತಿ ಕುರಿತು ಕಳವಳ ವ್ಯಕ್ತಪಡಿಸಿದ ಸಿಎಂ, ಯಾವುದೇ ಕಾರಣಕ್ಕೂ ಸಮೀಕ್ಷೆಯ ಗಡುವು ವಿಸ್ತರಿಸಲಾಗುವುದಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದರು.
ಅಕ್ಟೋಬರ್ 7ರೊಳಗೆ ಸಮೀಕ್ಷೆ ಮುಗಿಯಲೇಬೇಕು. ಅವಧಿ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಪುನರುಚ್ಚರಿಸಿದರು.
ಸಮೀಕ್ಷೆಯ ವೇಗ ಹೆಚ್ಚಿಸಲು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳಿಗೆ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸಿ ತಕ್ಷಣ ಸಮಸ್ಯೆ ಬಗೆಹರಿಸುವಂತೆ ಸೂಚಿಸಲಾಗಿದೆ.
ಜೊತೆಗೆ ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಸಚಿವರಿಗೆ ಸಹ ಸಮೀಕ್ಷೆಯ ಮೇಲ್ವಿಚಾರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಆದೇಶಿಸಲಾಗಿದೆ.
ಪ್ರತಿದಿನ ಕೇವಲ ಶೇ. 2.4ರಷ್ಟು ಪ್ರಗತಿ ದಾಖಲಾಗಿರುವ ಹಿನ್ನೆಲೆಯಲ್ಲಿ, ಇನ್ನುಮುಂದೆ ಕನಿಷ್ಠ ಶೇ. 10ರಷ್ಟು ಸಮೀಕ್ಷೆ ನಡೆಯಲೇಬೇಕು ಎಂಬ ಗುರಿ ಸಿಎಂ ನೀಡಿದ್ದಾರೆ.
ರಾಜ್ಯದಾದ್ಯಂತ ಒಟ್ಟು 1.43 ಕೋಟಿ ಕುಟುಂಬಗಳನ್ನು ಸಮೀಕ್ಷೆಯೊಳಗೆ ತರಬೇಕೆಂದು ಗುರಿ ನಿಗದಿಪಡಿಸಲಾಗಿದೆ.
ಆದರೆ ಈಗಾಗಲೇ ಕೇವಲ 2.76 ಲಕ್ಷ ಕುಟುಂಬಗಳ ಮಾಹಿತಿಯಷ್ಟೇ ಸಂಗ್ರಹಿಸಲಾಗಿದೆ. ಈ ನಿಧಾನಗತಿ ಕುರಿತು ಸಿಎಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಸಮೀಕ್ಷೆ ಸಂಬಂಧಿತ ಪ್ರಕ್ರಿಯೆಯಲ್ಲಿ ನ್ಯಾಯಾಲಯ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಯಾವುದೇ ರೀತಿಯ ಕಾನೂನು ಉಲ್ಲಂಘನೆ ಆಗದಂತೆ ಜಾಗ್ರತೆ ವಹಿಸಲಾಗುವುದು ಎಂದೂ ಹೇಳಿದರು.