Bengaluru: ನಾಳೆ ಕರ್ನಾಟಕ ಬಂದ್ಗೆ (no permission for Kar Bandh) ಅವಕಾಶ ನೀಡುವುದಿಲ್ಲ. ಆದರೆ ರಾಜ್ಯ ಸರ್ಕಾರ ಹೋರಾಟಗಾರರು ನಡೆಸುವ ಪ್ರತಿಭಟನೆಗೆ ಯಾವುದೇ ಅಡ್ಡಿ ಉಂಟು
ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ಗೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಆದರೆ ಕೆಲ ಸಂಘಟನೆಗಳು ಬಂದ್ಗೆ ಕರೆ ನೀಡಿದ
ಹಿನ್ನೆಲೆ ನಾವು ಪ್ರತಿಭಟನಾಕಾರರಿಗೆ ಯಾವುದೇ ರೀತಿಯ ಅಡ್ಡಿ ಮಾಡುವುದಿಲ್ಲ. ಅವರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶವಿದೆ. ಇನ್ನು ರಾಜ್ಯ ಸರ್ಕಾರ ಸಾರ್ವಜನಿಕರನ್ನು
ರಕ್ಷಣೆ (no permission for Kar Bandh) ಮಾಡಲೇಬೇಕು.
ಹೀಗಾಗಿ ಸರ್ಕಾರ ಜನತೆಗೆ ರಕ್ಷಣೆ ಕೊಡುತ್ತದೆ. ಸಾರ್ವಜನಿಕರಿಗೆ ತೊಂದರೆಯುಂಟು ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇನ್ನು ಈಗಾಗಲೇ ಸುಪ್ರೀಂ ಕೋರ್ಟ್
(Supreme Court) ಬಂದ್ ಮಾಡಬಾರದು ಎಂದು ಹೇಳಿದೆ. ಹೀಗಾಗಿ ಬಂದ್ಗೆ ಅವಕಾಶ ನೀಡಲು ಸಾಧ್ಯವಿಲ್ಲ. ಬಂದ್ ದಿನವೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೆ, ನಮ್ಮ
ರಾಜ್ಯದ ಅಧಿಕಾರಿಗಳಿಗೆ ವರ್ಚುಯಲ್ ಮೂಲಕ ಬೇಡ, ನೀವೇ ಖುದ್ದು ಸಭೆಗೆ ಹಾಜರಾಗಿ ಎಂದು ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ :
ಕನ್ನಡಪರ ಸಂಘಟನೆಗಳು ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಕರೆ ಹಿನ್ನಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಕುರಿತು
ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ (Dayanand) ಅವರು, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ
ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
144 ಸೆಕ್ಷನ್ ಜಾರಿ ವೇಳೆ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಬಂದ್ ವೇಳೆ ಸಾರ್ವಜನಿಕರ ಆಸ್ತಿ ಪಾಸ್ತಿ ನಾಶವಾದರೆ ಅದಕ್ಕೆ ಸಂಘಟಕರೇ ಹೊಣೆಯಾಗುತ್ತಾರೆ. ವಾಹನಗಳನ್ನು
ತಡೆಯುವುದು, ಕಲ್ಲು ಹೊಡೆಯುವುದು, ವ್ಯಾಪಾರಿಗಳಿಗೆ ತೊಂದರೆ ಕೊಡುವುದು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯ ಮೆರವಣಿಗೆಗೆ ಯಾವುದೇ ಅವಕಾಶವಿಲ್ಲ.
ಬಲವಂತವಾಗಿ ಬಂದ್ ಮಾಡಿದರೆ ಹೈಕೋರ್ಟ್ (High court) ಹಾಗೂ ಸುಪ್ರೀಂ ಕೋರ್ಟ್ನ ಆದೇಶ ಉಲ್ಲಂಘನೆಯಾಗುತ್ತದೆ. ಹೀಗಾಗಿ ಬಲವಂತದ ಬಂದ್ಗೆ ಒತ್ತಾಯಿಸುವವರ ವಿರುದ್ದ ಕ್ರಮ
ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ: ನಿಮ್ಮ ಉಗುರುಗಳು ಆರೋಗ್ಯದ ಬಗ್ಗೆ ಏನನ್ನು ತಿಳಿಸುತ್ತದೆ ಅಂತ ಗೊತ್ತಾ?