ಬೆಂಗಳೂರು, ಆ. 14: ನಾನು ಸಾಮನ್ಯ ಜನರಂತೆ ಸಂಚರಿಸುತ್ತೇನೆ ನನಗೆ ಝೀರೋ ಟ್ರಾಫಿಕ್ ಬೇಡ ನನ್ನಿಂದ ಸಾರ್ವಜನಿಕರು ತೊಂದರೆ ಅನುಭವಿಸುವುದು ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ನನಗೆ ಝೀರೋ ಟ್ರಾಫಿಕ್ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದರು. ಅದರ ಬೆನ್ನಲೆ ಇದೀಗ ಸಿಎಂ ಬೆಮ್ಮಾಯಿ ಕೂಡ ನನಗೆ ನನಗೆ ನಗರದಲ್ಲಿ ಝೀರೋ ಟ್ರಾಫಿಕ್ ಬೇಡ ಎಂದು ತಿಳಿಸಿದ್ದಾರೆ. ತಾವು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ. ಸಿಗ್ನಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಸಾಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೆ, ತಾವು ಓಡಾಡುವ ವೇಳೆ ಆಂಬುಲೆನ್ಸ್ಗಳ ಸುಗಮ ಓಡಾಟಕ್ಕೆ ಅವಕಾಶ ನೀಡುವಂತೆಯೂ ಆದೇಶಿಸಿದ್ದಾರೆ.
ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ, ಜಿಲ್ಲೆಗಳಿಗೆ ಭೇಟಿ ನೀಡಿದಾಗ ಗಾರ್ಡ್ ಆಫ್ ಆನರ್ ನೀಡುವುದನ್ನು ಸ್ಥಗಿತಗೊಳಿಸುವಂತಹ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಾರ್ವಜನಿಕರಿಗೆ ಆಗುವ ಕಿರಿಕಿರಿಗಳನ್ನು ತಪ್ಪಿಸಲು ಇದೀಗ ಝೀರೋ ಟ್ರಾಫಿಕ್ ಕೂಡ ಬೇಡ ಎಂದು ಹೇಳುವ ಮೂಲಕ ಸಾರ್ವಜನಿಕರ ಪ್ತಶಂಸೆಗೆ ಪಾತ್ರರಾಗಿದ್ದಾರೆ.