ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆಯುವುದು ತಪ್ಪಲ್ಲ: ಯುಟಿ ಖಾದರ್

Mangalore: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅವರು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು ತೊಳೆದಿದ್ದೇನೆ. ಮಕ್ಕಳ ಶೌಚಾಲಯವನ್ನು ಮಕ್ಕಳೇ ಸ್ವಚ್ಚಗೊಳಿಸಿದರೆ ತಪ್ಪಿಲ್ಲ. ಇದು ಶಿಕ್ಷಣದ ಒಂದು ಭಾಗ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯ (Toilet) ತೊಳೆಯುವುದು ತಪ್ಪು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಲಾಗುತ್ತಿದ್ದು, ಈ ಬಗ್ಗೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು, ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ತೊಳೆಯುವುದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಾಗಿದ್ದಾಗ ನಾವೇ ತೊಳೆಯುತ್ತಿದ್ದೇವು ಅದು ಶಿಕ್ಷಣದ ಒಂದು ಭಾಗ ಮಕ್ಕಳು ಸ್ವಾವಲಂಭಿಗಳಾಗಬೇಕು. ನಮ್ಮ ಮನೆಯಲ್ಲಿರುವ ಮಕ್ಕಳಿಗೂ ಕೂಡ ಅದನ್ನೇ ಕಲಿಸುತ್ತೇವೆ‌ ಮತ್ತು ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲು ಕೈಗೆ ಗ್ಲೌಸ್ (Glouse) ಹಾಕಿ ಶೌಚಾಲಯ ಕ್ಲೀನ್ ಮಾಡಿಸಬೇಕು. ಆದರೆ ಒತ್ತಾಯ‌ಪೂರ್ವಕವಾಗಿ ಸ್ವಚ್ಚಗೊಳಿಸಬಾರದು ಎಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದಲ್ಲಿ ಮಾತನಾಡಿದರು…

ಇತ್ತೀಚೆಗೆ ರಾಜ್ಯದಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ದೊಡ್ಡ ಸುದ್ದಿಯಾಗಿದ್ದು, ಬೆಂಗಳೂರು (Bengaluru), ಶಿವಮೊಗ್ಗ ಮತ್ತು ಕೋಲಾರ (Kolar) ಜಿಲ್ಲೆಗಳಲ್ಲಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳಿ ಬೆಳಕಿಗೆ ಬಂದಿದೆ. ಮತ್ತೊಂದೆಡೆ ಶಾಲೆಯಲ್ಲಿ ಸ್ವಚ್ಛ ಮಾಡುವವರಿಲ್ಲ ಎನ್ನುವ ಆರೋಪಗಳು ಶಿಕ್ಷಕರಿಂದ ಬಂದಿವೆ.

ಇನ್ನು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ನಂತರ ಹೊಸ ನಿಯಮವನ್ನೂ ರೂಪಿಸಲಾಗಿತ್ತು. ಇದಕ್ಕೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿರುವುದಲ್ಲದೆ, ವಿದ್ಯಾರ್ಥಿಗಳು ಕಸ ಗುಡಿಸುವುದರಲ್ಲಿ, ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ. ಇಂಥ ಕೆಲಸಗಳನ್ನು ಚಿಕ್ಕಂದಿನಲ್ಲೇ ತಿಳಿದುಕೊಳ್ಳುವುದು ಉತ್ತಮ ಎಂದು ಮೂಡುಬಿದಿರೆಯಲ್ಲಿ ಯುಟಿ ಖಾದರ್ ಹೇಳಿದ್ದರು.

ಭವ್ಯಶ್ರೀ ಆರ್ ಜೆ

Exit mobile version