ಕೊರೊನಾ ಮಹಾಮಾರಿಯಿಂದಾಗಿ ೮ ತಿಂಗಳ ಕಾಲ ಯಾವುದೇ ಚಿತ್ರಮಂದಿರಗಳು ತೆರೆದಿರಲಿಲ್ಲ, ಯಾವುದೇ ಹೊಸ ಚಿತ್ರಗಳು ತೆರೆ ಕಂಡಿರಲಿಲ್ಲ. ಆದರೆ ಇದೀಗ ನವೆಂಬರ್ 20ರಂದು ಆಕ್ಟ್ ೧೯೭೮ ಚಿತ್ರ ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ.
ಡಿ.ಕ್ರಿಯೇಷನ್ಸ್ ಲಾಂಛನದಲ್ಲಿ ಮುಡಿಬರುತ್ತಿರುವ ಈ ಚಿತ್ರವನ್ನು ಅರ್. ದೇವರಾಜ್ ಅವರು ನಿರಮಿಸಿದ್ದು, ಮಂಸೋರೆ ಕಥೆ ಬರೆದು, ನಿರ್ದೇಶಿಸಿದ್ದಾರೆ. ಮಂಸೋರೆ, ವೀರೇಶ್ ಮಲ್ಲಣ್ಣ ಹಾಗೂ ದಯಾನಂದ್ ಟಿ ಕೆ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಈ ಚಿತ್ರಕ್ಕೆ ರಾಹುಲ್ ಶಿವಕುಮಾರ್ ಸಂಗೀತ ನಿರ್ದೇಶನ, ಸತ್ಯ ಹೆಗಡೆ ಛಾಯಾಗ್ರಹಣ ಹಾಗೂ ನಾಗೇಂದ್ರ ಕೆ ಉಜ್ಜನಿ ಸಂಕಲನವಿದೆ.
ಈ ಚಿತ್ರದಲ್ಲಿ ಯಜ್ಞ ಶೆಟ್ಟಿ, ಪ್ರಮೋದ್ ಶೆಟ್ಟಿ, ಬಿ.ಸರೇಶ್, ಸಂಚಾರಿ ವಿಜಯ್, ಶೃತಿ, ದತ್ತಣ್ಣ, ಅಚ್ಯುತ ಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಶೋಭ್ ರಾಜ್, ಶರಣ್ಯ, ನಂದಗೋಪಾಲ್, ರಾಘು ಶಿವಮೊಗ್ಗ, ಕಿರಣ್ ನಾಯಕ್ ಮುಂತಾದವರು ತಾರಾಬಳಗದಲ್ಲಿದ್ದಾರೆ.