ನವದೆಹಲಿ, ನ. 23: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್ಅಂಗ ಪಕ್ಷಗಳು ನವೆಂಬರ್ 26 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಕೇಂದ್ರ ಸರ್ಕಾರವು ವ್ಯವಹಾರವನ್ನು ಸುಲಭಗೊಳಿಸುವ ಹೆಸರಿನಲ್ಲಿ ತನ್ನ ನೀತಿಗಳನ್ನು ಮುಂದುವರೆಸುತ್ತಿದೆ. ಇದರಿಂದ ವ್ಯಾಪಕ ಬಿಕ್ಕಟ್ಟು ಉಲ್ಬಣಗೊಳ್ಳಲಿದೆ ಎಂದು ಕಾರ್ಮಿಕ ಸಂಘಟನೆಗಳು ಆರೋಪಿಸಿವೆ.
ನವೆಂಬರ್ ೨೬ರಂದು ನಡೆಯಲಿರುವ ಮುಷ್ಕರಕ್ಕೆ 16 ಎಡ ಸಂಘಟನೆಗಳು ಹಾಗೂ ಕಾಂಗ್ರೆಸ್ ಮಿತ್ರ ಪಕ್ಷಗಳು ಕೈಜೋಡಿಸಲಿವೆ. ಹೀಗಾಗಿ ದೇಶದ ಹಲವು ಭಾಗಗಳಲ್ಲಿ ಜನಜೀವನ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ಐಎನ್ಟಿಯುಸಿ, ಎಐಟಿಯುಸಿ, ಎಚ್ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಎಸ್, ಸೇವಾ, ಟೈಸಿಸಿಟಿಯು, ಎಲ್ಪಿಎಫ್ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.