• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾಗ್ಪುರದ ನೀಟ್ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ: NTA ತಾಂತ್ರಿಕ ಎಡವಟ್ಟಿಗೆ ತೀವ್ರ ಆಕ್ರೋಶ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ನಾಗ್ಪುರದ ನೀಟ್ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ: NTA ತಾಂತ್ರಿಕ ಎಡವಟ್ಟಿಗೆ ತೀವ್ರ ಆಕ್ರೋಶ
0
SHARES
22
VIEWS
Share on FacebookShare on Twitter

ನೀಟ್ ಮರುಪರೀಕ್ಷೆಯಲ್ಲಿ NTA (NTA confusion in NEET reexam) ಗೊಂದಲ; ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಕೇಂದ್ರ ನಿಯೋಜನೆ

ಸ್ಥಳೀಯ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗೆ ವಿದೇಶದ ಪರೀಕ್ಷಾ ಕೇಂದ್ರ ನಿಯೋಜನೆ

ತಾಂತ್ರಿಕ ದೋಷ ಒಪ್ಪಿಕೊಂಡ NTA ಹೊಸ ಹಾಲ್ ಟಿಕೆಟ್ ಬಿಡುಗಡೆ

New delhi : ಜೂನ್ 21ರಂದು ನಡೆಯಲಿರುವ ನೀಟ್ (NEET-UG) ಮರುಪರೀಕ್ಷೆಗೆ (NTA confusion in NEET reexam) ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತೊಮ್ಮೆ ವಿವಾದಕ್ಕೆ ಸಿಲುಕಿದೆ.

ಮಹಾರಾಷ್ಟ್ರದ ನಾಗ್ಪುರದ ವಿದ್ಯಾರ್ಥಿಯೊಬ್ಬರಿಗೆ ಸ್ಥಳೀಯ ಪರೀಕ್ಷಾ ಕೇಂದ್ರದ ಬದಲು ಅಬುಧಾಬಿಯಲ್ಲಿರುವ ಪರೀಕ್ಷಾ ಕೇಂದ್ರವನ್ನು ಹಾಲ್ ಟಿಕೆಟ್‌ನಲ್ಲಿ ನಮೂದಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.

NTA confusion in NEET reexam

ಈಗಾಗಲೇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಟೀಕೆಗೆ ಗುರಿಯಾಗಿರುವ NTA, ಈ ಹೊಸ ಎಡವಟ್ಟಿನಿಂದ (NTA confusion in NEET reexam) ವಿದ್ಯಾರ್ಥಿಗಳು ಹಾಗೂ ಪೋಷಕರ ಅಸಮಾಧಾನಕ್ಕೆ ಮತ್ತಷ್ಟು ಕಾರಣವಾಗಿದೆ.

ನಾಗ್ಪುರ ನಿವಾಸಿಯಾದ 18 ವರ್ಷದ ವಿದ್ಯಾರ್ಥಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ಮರುಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ತನ್ನ ಅನುಕೂಲಕ್ಕೆ ತಕ್ಕಂತೆ ಮೂರು ಸ್ಥಳೀಯ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದನು.

ಆದರೆ ಜೂನ್ 14ರಂದು ಬಿಡುಗಡೆಯಾದ ಹಾಲ್ ಟಿಕೆಟ್‌ನಲ್ಲಿ ಅವನಿಗೆ ಸಂಯುಕ್ತ ಅರಬ್ ಎಮಿರೇಟ್ಸ್‌ನ ಅಬುಧಾಬಿಯಲ್ಲಿರುವ ‘ಅಬುಧಾಬಿ ಇಂಡಿಯನ್ ಸ್ಕೂಲ್’ (Abu Dhabi Indian School) ಅನ್ನು ಪರೀಕ್ಷಾ ಕೇಂದ್ರವಾಗಿ ನೀಡಲಾಗಿತ್ತು.

ಇದನ್ನು ಕಂಡ ವಿದ್ಯಾರ್ಥಿ ಮತ್ತು ಕುಟುಂಬದವರು ಆಘಾತಕ್ಕೊಳಗಾಗಿದ್ದು, ತಕ್ಷಣವೇ NTA ಅಧಿಕಾರಿಗಳ ಗಮನಕ್ಕೆ ವಿಷಯವನ್ನು ತಂದಿದ್ದಾರೆ.

ಈ ಘಟನೆ ಕುಟುಂಬಕ್ಕೆ ದೊಡ್ಡ ಸಂಕಷ್ಟವನ್ನುಂಟು ಮಾಡಿತು. ವಿದ್ಯಾರ್ಥಿಯ ಬಳಿ ಪಾಸ್‌ಪೋರ್ಟ್ (Passport) ಕೂಡ ಇರಲಿಲ್ಲ. ಪರೀಕ್ಷೆಗೆ ಕೆಲವೇ ದಿನಗಳು ಬಾಕಿ ಇರುವಾಗ ವೀಸಾ, ಪ್ರಯಾಣ ವ್ಯವಸ್ಥೆ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುವುದು ಅಸಾಧ್ಯವಾಗಿತ್ತು.

ಸ್ಥಳೀಯ ಕೇಂದ್ರಗಳನ್ನು ಸ್ಪಷ್ಟವಾಗಿ ಆಯ್ಕೆ ಮಾಡಿಕೊಂಡಿದ್ದರೂ ವಿದೇಶದ ಕೇಂದ್ರ ನೀಡಿರುವುದು ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ವಿದ್ಯಾರ್ಥಿಯ ಕುಟುಂಬ

ಅಸಮಾಧಾನ ವ್ಯಕ್ತಪಡಿಸಿದೆ. ಈಗಾಗಲೇ ಮರುಪರೀಕ್ಷೆಯ ಒತ್ತಡದಲ್ಲಿದ್ದ ವಿದ್ಯಾರ್ಥಿಗೆ ಈ ಬೆಳವಣಿಗೆ ಹೆಚ್ಚುವರಿ ಮಾನಸಿಕ ಒತ್ತಡವನ್ನುಂಟು ಮಾಡಿತು.

ವಿದ್ಯಾರ್ಥಿಯ ಪೋಷಕರು ತಕ್ಷಣವೇ NTA ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆಯನ್ನು ವಿವರಿಸಿದರು. ನಂತರ ಅಧಿಕಾರಿಗಳು ಇದು ತಾಂತ್ರಿಕ ದೋಷದಿಂದ ಸಂಭವಿಸಿದೆ ಎಂದು ಒಪ್ಪಿಕೊಂಡು, ಶೀಘ್ರದಲ್ಲೇ ಸರಿಪಡಿಸುವುದಾಗಿ ಭರವಸೆ ನೀಡಿದರು.

ಬಳಿಕ ವಿದ್ಯಾರ್ಥಿಗೆ ನಾಗ್ಪುರದ ಸ್ಥಳೀಯ ಪರೀಕ್ಷಾ ಕೇಂದ್ರವನ್ನು ಒಳಗೊಂಡ ಹೊಸ ಹಾಲ್ ಟಿಕೆಟ್ ನೀಡಲಾಗಿದೆ ಎಂದು NTA ಮಹಾನಿರ್ದೇಶಕ ಅಭಿಷೇಕ್ ಸಿಂಗ್ (Abhishek Singh) ತಿಳಿಸಿದ್ದಾರೆ. ಈ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ಈ ಸಮಸ್ಯೆ ಕೇವಲ ಒಬ್ಬ ವಿದ್ಯಾರ್ಥಿಗೆ ಮಾತ್ರ ಸೀಮಿತವಾಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಹಲವು ವಿದ್ಯಾರ್ಥಿಗಳು ತಮ್ಮ ಆಯ್ಕೆ ಮಾಡಿದ ಸ್ಥಳೀಯ ಕೇಂದ್ರಗಳ ಬದಲು ದೂರದ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನೀಡಲಾಗಿದೆ ಎಂದು ದೂರಿದ್ದಾರೆ.

ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ಹೊಣೆ ಹೊತ್ತಿರುವ NTA ಇಂತಹ ಪುನರಾವರ್ತಿತ ತಾಂತ್ರಿಕ ದೋಷಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಮಹತ್ವದ ಪರೀಕ್ಷೆಗಳಲ್ಲಿ ಸಣ್ಣ ಎಡವಟ್ಟುಗಳಿಗೂ ಅವಕಾಶ ಇರಬಾರದು ಎಂಬುದು ಪೋಷಕರು ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ.

ಇದನ್ನು ಓದಿ : https://vijayatimes.com/government-review-guarantee-schemes/

Tags: ExamNEETNewdelhiStudents

Related News

ವಿಶ್ವಕಪ್‌ನಲ್ಲಿ ಅರ್ಜೆಂಟೀನಾ ಅಬ್ಬರ: ಸ್ವಿಜರ್‌ಲೆಂಡ್‌ಗೆ ಮಣ್ಣು ಮುಕ್ಕಿಸಿ ಸೆಮಿಫೈನಲ್‌ಗೆ ಲಗ್ಗೆ
Sports

ವಿಶ್ವಕಪ್‌ನಲ್ಲಿ ಅರ್ಜೆಂಟೀನಾ ಅಬ್ಬರ: ಸ್ವಿಜರ್‌ಲೆಂಡ್‌ಗೆ ಮಣ್ಣು ಮುಕ್ಕಿಸಿ ಸೆಮಿಫೈನಲ್‌ಗೆ ಲಗ್ಗೆ

July 13, 2026
ರಾಮಮಂದಿರ ದೇಣಿಗೆ ಕಳ್ಳತನದ ಬಳಿಕ ರಾಜ್ಯದ ದೇವಾಲಯಗಳಲ್ಲಿ ಹುಂಡಿ ಎಣಿಕೆಗೆ ಕಠಿಣ ಮಾರ್ಗಸೂಚಿ ಜಾರಿ
ದೇಶ-ವಿದೇಶ

ರಾಮಮಂದಿರ ದೇಣಿಗೆ ಕಳ್ಳತನದ ಬಳಿಕ ರಾಜ್ಯದ ದೇವಾಲಯಗಳಲ್ಲಿ ಹುಂಡಿ ಎಣಿಕೆಗೆ ಕಠಿಣ ಮಾರ್ಗಸೂಚಿ ಜಾರಿ

July 13, 2026
ಬಳಕೆದಾರರ ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್‌ನ ವಿವಾದಾತ್ಮಕ AI ಇಮೇಜ್ ಫೀಚರ್‌ಗೆ ಬ್ರೇಕ್
ದೇಶ-ವಿದೇಶ

ಬಳಕೆದಾರರ ಆಕ್ರೋಶದ ಬಳಿಕ ಇನ್‌ಸ್ಟಾಗ್ರಾಮ್‌ನ ವಿವಾದಾತ್ಮಕ AI ಇಮೇಜ್ ಫೀಚರ್‌ಗೆ ಬ್ರೇಕ್

July 13, 2026
ಪ್ರತಿ ತಿಂಗಳ 2ನೇ ಭಾನುವಾರ ಎಸ್‌ಸಿ-ಎಸ್‌ಟಿ ಜನರ ಸಮಸ್ಯೆಗಳ ಆಲಿಕೆ: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸರ್ಕಾರದ ಹೊಸ ನಿರ್ದೇಶನ
ಪ್ರಮುಖ ಸುದ್ದಿ

ಪ್ರತಿ ತಿಂಗಳ 2ನೇ ಭಾನುವಾರ ಎಸ್‌ಸಿ-ಎಸ್‌ಟಿ ಜನರ ಸಮಸ್ಯೆಗಳ ಆಲಿಕೆ: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸರ್ಕಾರದ ಹೊಸ ನಿರ್ದೇಶನ

July 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.