Bengaluru: ಬೆಂಗಳೂರಿನ 16 ನೆಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (International Film Festival) ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Sivakumar) ಅವರು ನೀಡಿರುವ ಹೇಳಿಕೆಯೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. (Nut Bolt statement) ಡಿಕೆ.ಶಿವಕುಮಾರ್ ಅವರ ಹೇಳಿಕೆಗೆ ಸಿನಿ ಕಲಾವಿದರು ಹಾಗೂ ವಿರೋಧ ಪಕ್ಷಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿವೆ.
ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಟಾರ್ ನಟ-ನಟಿಯರು ಗೈರಾದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದರು. ಸಿನಿ ಕಲಾವಿದರಿಗೆ ನಿಮ್ಮ ನಟ್ಟು ಬೋಲ್ಟ್ ಟೈಟ್ ಮಾಡೋದು ಗೊತ್ತು. ಇದನ್ನು ವಾರ್ನ್ ಅಂತಾ ಆದ್ರೂ ಅಂದ್ಕೊಳಿ, ಮನವಿ ಅಂತಾ ಆದ್ರೂ ಅಂದುಕೊಳ್ಳಿ ಅಂತ ಎಚ್ಚರಿಸಿದ್ದರು.
ಇನ್ನು ಈ ಹೇಳಿಕೆಗೆ ಸಾಮಾಜಿಕ ಜಾಲತಾಣವಾದ (Social networking) ಎಕ್ಸ್ ಅಲ್ಲಿ ಪ್ರತಿಕ್ರಿಯೆ ನೀಡಿರುವ ಜಗ್ಗೇಶ್ ಅವರು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮ ಇದ್ದಿದ್ದು 7 ಗಂಟೆಗೆ ನನಗೆ ಆಹ್ವಾನ ಪತ್ರಿಕೆ ತಲುಪಿದ್ದು 6 ಗಂಟೆಗೆ, ಜೊತೆಗೆ ಒಗಟ್ಟಿಲ್ಲ ಸಂವಾದವಿಲ್ಲ ಒಟ್ಟಾರೆ ಕಲಾವಿದರ ಸಂಘವೇ (Artists Association) ಕಣ್ಮರೆಯಾಗಿದೆ.

ಕನ್ನಡ ಚಿತ್ರರಂಗ (Kannada cinema) ಅವಸಾನ ಕರ್ನಾಟಕದಲ್ಲಿ ಯಾವ ಕಲಾವಿದರು ಏನಾಗಿದ್ದಾರೆ ಕಲಾವಿದರಾದ ನಮಗೆ ಮಾಹಿತಿಯಿಲ್ಲ. ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೆ ಇಲ್ಲಾ ಇನ್ನು ಟೈಟ್ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
ಇನ್ನು ವಿಪಕ್ಷ ನಾಯಕ ಆರ್.ಅಶೋಕ್ (Opposition leader R. Ashok) ಅವರು ತೀವ್ರವಾಗಿ ಕಿಡಿಕಾರಿದ್ದು, ನಿಮ್ಮ ಸಚಿವ ರಾಜಣ್ಣ (Minister Rajanna) ಅವರ ನಟ್ ಬೋಲ್ಟನ್ನೇ ಟೈಟ್ ಮಾಡೋಕೆ ಆಗಿಲ್ಲ. ಇನ್ನು ಯಶ್, ಸುದೀಪ್, ದರ್ಶನ್ ಅವರ ನಟ್ ಬೋಲ್ಟನ್ನೂ ಟೈಟ್ ಮಾಡೋಕೆ ಆಗುತ್ತಾ..? (Nut Bolt statement) ಅವರ ಸಿನಿಮಾಗಳೇನು ನಿಮ್ಮ ಆಶೀರ್ವಾದಿಂದ ಗೆದ್ದಿದ್ದಾವಾ..? ಎಂದು ತಿರುಗೇಟು ಕೊಟ್ಟಿದ್ದಾರೆ.
ಇದನ್ನು ಓದಿ: ಗಡಿ ಜಿಲ್ಲೆಗಳಲ್ಲಿ ಹಕ್ಕಿಜ್ವರದ ಭೀತಿ: ಒಂದೇ ವಾರದಲ್ಲಿ ಸಾವಿರಾರು ಕೋಳಿಗಳ ಸಾವು
ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ (Congress party) ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy) ಅವರು ಮಾತನಾಡಿ, ಜನರು ಕಾಂಗ್ರೆಸ್ಗೆ 135 ಸ್ಥಾನಗಳನ್ನು ನೀಡಿದ್ದು ನಟ್ಗಳು ಮತ್ತು ಬೋಲ್ಟ್ಗಳನ್ನು ಸರಿಪಡಿಸಲು ಅಲ್ಲ ಎಂದು ತಿರುಗೇಟು ನೀಡಿದ್ದಾರೆ.ಶಿವಕುಮಾರ್ ಅವರ ಪಾದಗಳು ನೆಲದ ಮೇಲೆ ಇಲ್ಲದಂತೆ ಕಾಣುತ್ತಿದೆ. ಅಧಿಕಾರವು ಅವರನ್ನು ದುರಹಂಕಾರದಿಂದ ಮಾತನಾಡುವಂತೆ ಮಾಡುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು ಎಂದು ಹೇಳಿ ಟಾಂಗ್ ನೀಡಿದ್ದಾರೆ.
.ಅಕ್ಷತಾ