• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
‘ಒಂದು ರಾಷ್ಟ್ರ, ಒಂದು ಚುನಾವಣೆ’: ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವ ಚಿಂತನೆಗೆ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚನೆ
0
SHARES
117
VIEWS
Share on FacebookShare on Twitter

Newdelhi: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (one nation one election) ಅವರ ನೇತೃತ್ವದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಪರಿಕಲ್ಪನೆಯನ್ನು ಸಾಕಾರಗೊಳಿಸುವ

ಸಾಧ್ಯತೆಗಳನ್ನು ಕಂಡುಕೊಳ್ಳಲು ಸಮಿತಿಯೊಂದನ್ನು ಕೇಂದ್ರ ಸರ್ಕಾರ ರಚಿಸಿದ್ದು, ದೇಶದಲ್ಲಿ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುವಂತಾಗಬೇಕು

ಎಂದು ಪ್ರತಿಪಾದಿಸಿಕೊಂಡು ಬಂದಿರುವ ಕೇಂದ್ರ ಸರ್ಕಾರ ತನ್ನ ಉದ್ದೇಶವನ್ನು ಕಾನೂನು ರೂಪದಲ್ಲಿ ಜಾರಿಗೊಳಿಸುವ ಉದ್ದೇಶದಿಂದ ಮಹತ್ವದ ಹೆಜ್ಜೆ ಇರಿಸಿದೆ.

one nation, one election

ಕೇಂದ್ರ ಸರ್ಕಾರವು ಸೆ 18 ರಿಂದ 22ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ಕರೆದಿರುವ ಬೆನ್ನಲ್ಲೇ ಈ ಸಮಿತಿ ರಚಿಸಲಾಗಿದ್ದು, ಸಮಿತಿಯ ಸದಸ್ಯರ ಕುರಿತಾದ ಅಧಿಸೂಚನೆಯನ್ನು

ಬಳಿಕ ಹೊರಡಿಸಲಾಗುತ್ತದೆ. ಗಣೇಶ ಹಬ್ಬದ ಸಮಯದಲ್ಲಿ ನಡೆಯುವ ಸಂಸತ್ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಡಿಸಲಿದೆ ಎಂದು

ಕೆಲವು ಮೂಲಗಳು (one nation one election) ಗುರುವಾರ ತಿಳಿಸಿವೆ.

Apple iPhone 15: ಆಪಲ್ ಐಫೋನ್ 15 ಹಾಗೂ ಪಿಕ್ಸೆಲ್ 8 ಸರಣಿಯ ಫೋನ್‌ಗಳ ಬಿಡುಗಡೆಯ ದಿನಾಂಕ ಪ್ರಕಟಿಸಿದ ಗೂಗಲ್

ಇನ್ನು ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದು ‘ಒಂದು ದೇಶ, ಒಂದು ರಾಷ್ಟ್ರ’ ಯೋಜನೆಯ ಉದ್ದೇಶವಾಗಿದ್ದು, ಜನರು

ಒಂದೇ ಬಾರಿಗೆ ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮತ ಚಲಾಯಿಸುವಂತಾದರೆ ಸಮಯ ಹಾಗೂ ಭಾರಿ ಹಣದ ಉಳಿತಾಯವಾಗಲಿದೆ ಎನ್ನುವುದು ಕೇಂದ್ರ ಸರ್ಕಾರದ ತರ್ಕವಾಗಿದೆ.

narenda modi

ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿಗೆ ಉಳಿದ ಸದಸ್ಯರನ್ನು ನೇಮಕ ಮಾಡಿದ ಬಳಿಕ ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವುದರ ಸಾಧಕ- ಬಾಧಕಗಳ ಕುರಿತು

ಅಧ್ಯಯನ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದಲ್ಲಿನ 9 ವರ್ಷಗಳ ಅವಧಿಯಲ್ಲಿ ಕೇಂದ್ರ

ಸರ್ಕಾರವು ಸಂಸತ್‌ನ ವಿಶೇಷ ಅಧಿವೇಶನವನ್ನು ಕರೆದಿರುವುದು ಇದೇ ಮೊದಲ ಬಾರಿಯಾಗಿದೆ.

ಜೂನ್ (June) 30, 2017ರ ಮಧ್ಯರಾತ್ರಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜಾರಿ ಉದ್ದೇಶದಿಂದ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಶೇಷ ಜಂಟಿ ಕಲಾಪ ನಡೆಸಲಾಗಿತ್ತು.

ಆದರೆ ಸಂಸತ್‌ನ ಉಭಯ ಸದನಗಳಲ್ಲಿ ಈ ಸಲ ಐದು ದಿನಗಳ ಕಾಲ ಪೂರ್ಣ ಪ್ರಮಾಣದ ಪ್ರತ್ಯೇಕ ಕಲಾಪಗಳು ನಡೆಯಲಿವೆ.

ಇನ್ನು ಅನೇಕ ಊಹಾಪೋಹಗಳಿಗೆ ಕೇಂದ್ರ ಸರ್ಕಾರ ದಿಢೀರ್ ವಿಶೇಷ ಅಧಿವೇಶನ ಕರೆದಿರುವುದು ಕಾರಣವಾಗಿದ್ದು, ‘ಒಂದು ದೇಶ, ಒಂದು ಚುನಾವಣೆ’ ಕುರಿತಾದ ವಿಧೇಯಕ ಮಂಡಿಸುವುದು

ಹಾಗೂ ಏಕರೂಪ ನಾಗರಿಕ ಸಂಹಿತೆಯ ಮಸೂದೆ ಮತ್ತು ಜಮ್ಮು (Jammu) ಮತ್ತು ಕಾಶ್ಮೀರಕ್ಕೆ (Kashmir) ರಾಜ್ಯ ಸ್ಥಾನಮಾನ ಮರಳಿ ನೀಡುವುದು. ಅಲ್ಲದೆ ಅಲ್ಲಿ ಚುನಾವಣೆ ನಡೆಸುವುದು

ಮುಂತಾದವುಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ಕೇಂದ್ರ ಸರ್ಕಾರವು ವಿಶೇಷ ಅಧಿವೇಶನದ ಗುಟ್ಟನ್ನು ಈವರೆಗೂ ಬಹಿರಂಗಪಡಿಸಿಲ್ಲ.

ಭವ್ಯಶ್ರೀ ಆರ್.ಜೆ

Tags: electionNarendra ModiNewdelhipoliticsramanath kovindsession

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.