ಮೈಸೂರು ಆ 21 : ಕೊರನಾ ನಿಯಂತ್ರಣ ಮಾಡುವ ಉದ್ದೇಶದಿಂದ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಇದನ್ನು ವಿರೋಧಿಸಿ ವಿವಿಧ ಸಂಘ, ಸಂಸ್ಥೆಗಳು ನಗರದ ದೇವರಾಜ ಅರಸು ರಸ್ತೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿವೆ. ಶನಿವಾರ ಹಾಗೂ ಭಾನುವಾರ ವ್ಯಾಪಾರ ಹೆಚ್ಚಾಗಿರುತ್ತದೆ. ತಕ್ಷಣವೇ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಬೇಕು ಈ ಎರಡು ದಿನಗಳಲ್ಲಿ ಆಗುವ ವ್ಯಾಪರ ವಾರದ ಉಳಿದ ಐದು ದಿನಗಳಲ್ಲಿ ಆಗುವ ವ್ಯಾಪಾರವೂ ಒಂದೆಯಾಗಿದೆ. ಮದುವೆ ಸಮಾರಂಭ ನಡೆಸುವ ಹಾಲ್ಗಳಿಗೂ ತೊಂದರೆಯಾಗಿದೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯೆಕ್ತಪಡಿಸಿದರು.
ದೇವರಾಜ ಅರಸು ರಸ್ತೆಯ ಮಳಿಗೆಗಳ ಮುಂಭಾಗದಲ್ಲಿ ಕಪ್ಪು ಬಟ್ಟೆ ಹಾಗೂ ಕಪ್ಪು ಪಟ್ಟಿಯನ್ನ ಧರಿಸಿ ಪ್ರತಿಭಟನೆ ನಡೆಸಿದರು. ವೀಕೆಂಡ್ ಕರ್ಫ್ಯೂ ಅನಗತ್ಯ ಹಾಗೂ ಅವೈಜ್ಞಾನಿಕವಾದದ್ದು, ಹೀಗಾಗಿ ಯಾವುದೇ ಕಾರಣಕ್ಕೂ ವೀಕೆಂಡ್ ಕರ್ಫ್ಯೂ ಮುಂದುವರಿಸಬಾರದು. ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ವ್ಯಾಪರಿಗಳು ಒತ್ತಾಯಿಸಿದರು.